ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಎರಡೂ ಕೈಗಳಿಲ್ಲದ ಈಜು ಪಟುವಿನ ಪರದಾಟ: ಸರ್ಕಾರಕ್ಕೆ ತಪರಾಕಿ; ₹ 2 ಲಕ್ಷ ದಂಡ

Published : 21 ಜುಲೈ 2025, 15:40 IST
Last Updated : 21 ಜುಲೈ 2025, 15:40 IST
ಫಾಲೋ ಮಾಡಿ
Comments
ಪ್ರಕರಣವೇನು?
ಹತ್ತು ವರ್ಷದ ಬಾಲಕನಾಗಿದ್ದಾಗ ದುರಂತವೊಂದರಲ್ಲಿ ಎರಡೂ ಕೈಗಳನ್ನು ಕಳೆದುಕೊಂಡ ಕೆ.ಎಸ್‌.ವಿಶ್ವಾಸ್‌ ರಾಷ್ಟ್ರೀಯ–ಅಂತರರಾಷ್ಟ್ರೀಯ ಮಟ್ಟದ ವಿವಿಧ ಈಜು ಸ್ಪರ್ಧೆಗಳಲ್ಲಿ ಪಾಲ್ಗೊಂಡು ಭಾರತದ ಕೀರ್ತಿ ಪತಾಕೆ ಹಾರಿಸಿದ ಹಿನ್ನೆಲೆಯಲ್ಲಿ ಸರ್ಕಾರ ಅವರಿಗೆ ₹ 6 ಲಕ್ಷ ನಗದು ಬಹುಮಾನ ಘೋಷಿಸಿತ್ತು.
ಪದಕಗಳ ಸಾಧನೆ
2017 ಮತ್ತು 2018ರಲ್ಲಿ ಬರ್ಲಿನ್‌ನಲ್ಲಿ ನಡೆದ ಪ್ಯಾರಾ ಒಲಿಂಪಿಕ್‌ನಲ್ಲಿ ಕಂಚಿನ ಪದಕ, 2016ರಲ್ಲಿ ಕೆನಡಾದ ಒಟ್ಟಾವಾದಲ್ಲಿ ನಡೆದ ಅಂತರರಾಷ್ಟ್ರೀಯ ಪ್ಯಾರಾ-ಈಜು ಚಾಂಪಿಯನ್‌ಶಿಪ್‌ನಲ್ಲಿ 2 ಬೆಳ್ಳಿ ಮತ್ತು 1 ಕಂಚಿನ ಪದಕ,  2017ರಲ್ಲಿ ಉದಯಪುರದಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ-ಈಜು ಸ್ಪರ್ಧೆಯಲ್ಲಿ 1 ಚಿನ್ನ ಮತ್ತು 2 ಬೆಳ್ಳಿ ಪದಕಗಳು ಮತ್ತು 2018ರಲ್ಲಿ ಬೆಂಗಳೂರಿನಲ್ಲಿ ನಡೆದ ಭಾರತೀಯ ಮುಕ್ತ ಈಜು ಸ್ಪರ್ಧೆಯಲ್ಲಿ 5 ಚಿನ್ನದ ಪದಕಗಳೂ ಸೇರಿದಂತೆ ವಿವಿಧ ಸ್ತರಗಳ ಸ್ಪರ್ಧೆಗಳಲ್ಲಿ ವಿಶ್ವಾಸ್‌ ಪದಕಗಳ ಸರಮಾಲೆಯನ್ನೇ ತಮ್ಮ ಕೊರಳಿಗೆ ಹಾಕಿಕೊಂಡಿದ್ದಾರೆ.
ಸರ್ಕಾರದ ಕರ್ತವ್ಯ ಕೇವಲ ಆಡಳಿತಾತ್ಮಕ ಅಂಶಗಳನ್ನಷ್ಟೇ ಅವಲಂಬಿಸಬಾರದು ಮತ್ತು ಅಧಿಕಾರಶಾಹಿ ತಾಂತ್ರಿಕ ಅಂಶಗಳಿಗೆ ಮಾತ್ರವೇ ಒತ್ತು ನೀಡತಕ್ಕದ್ದಲ್ಲ. ಅದು ನೈತಿಕ, ಸಾಂವಿಧಾನಿಕ ಮತ್ತು ಮಾನವೀಯತೆಯ ಕಮಂಡಲವಾಗಿರಬೇಕು.
– ನ್ಯಾಯಮೂರ್ತಿ ಎಂ.ನಾಗಪ್ರಸನ್ನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT