ಈಡಿಗ ಮತ್ತು ಅತಿ ಹಿಂದುಳಿದವರ ಸಮಾವೇಶವನ್ನು ರಾಜ್ಯದ ಅನೇಕ ಕಡೆ ನಡೆಸಲು ಹರಿಪ್ರಸಾದ್ ತಯಾರಿ ನಡೆಸಿದ್ದರು. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿರುವ ಹೊತ್ತಿನಲ್ಲಿ, ಪಕ್ಷದಲ್ಲಿ ಭಿನ್ನಮತ ಇದೆ ಎಂದು ಬಿಂಬಿಸಿಕೊಳ್ಳುವ ಇಂತಹ ಕಾರ್ಯಕ್ರಮ, ಪಕ್ಷದ ವರ್ಚಸ್ಸಿಗೆ ಧಕ್ಕೆ ತರಲಿದೆ ಎಂಬ ಚರ್ಚೆ ಪಕ್ಷದಲ್ಲಿ ನಡೆದಿತ್ತು.