<p><strong>ಬೆಂಗಳೂರು:</strong> ‘ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್ ಕಟ್ಟಿ; ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂದು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ.</p><p>ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹಂದ್ರಾಳು ಗ್ರಾಮದ ಎಚ್.ಆರ್.ನಾಗಭೂಷಣ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಈ ಕುರಿತಂತೆ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣಾಧಿಕಾರಿಗೆ ಆದೇಶಿಸಿದ್ದು, ಎಫ್ಐಆರ್ ಸಿದ್ಧಪಡಿಸಿ ಕಳುಹಿಸುವಂತೆ ನಿರ್ದೇಶಿಸಿದ್ದಾರೆ.</p><p>‘ಪಂದ್ಯದಲ್ಲಿ ಸಚಿವ ಪರಮೇಶ್ವರ್ 2025ರ ಅಕ್ಟೋಬರ್ 19ರಂದು ತುಮಕೂರು ನಗರದಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ವಿರುದ್ಧ ₹500 ಬೆಟ್ಟಿಂಗ್ ಕಟ್ಟುವ ಮೂಲಕ ಅಪರಾಧ ಕೃತ್ಯಗಳನ್ನು ಎಸಗಲು ಸಾರ್ವಜನಿಕವಾಗಿ ಪ್ರಚೋದನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಅಪರಾಧಿಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಅಂತೆಯೇ, ಈ ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧವೂ ಕರ್ನಾಟಕ ಪೊಲೀಸ್ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕು’ ಎಂದು ಕೋರಿ ಖಾಸಗಿ ದೂರು ಸಲ್ಲಿಸಿದ್ದರು.</p><p>ಈ ಮೊದಲು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ಕೊಡಿಗೇನಹಳ್ಳಿ ಠಾಣೆಗೆ ದೂರು ನೀಡಿದ್ದರು. ‘ದೂರು ಆಧಾರರಹಿತ. ಇದರಲ್ಲಿ ಸಾಕ್ಷ್ಯದ ಕೊರತೆ ಇದೆ’ ಎಂಬ ಕಾರಣ ನೀಡಿ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು. ಈ ಸಂಬಂಧ ದೂರುದಾರರು ಮಧುಗಿರಿ ಡಿವೈಎಸ್ಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್ ಕಟ್ಟಿ; ಸಣ್ಣ ಸಂಘಟಿತ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಗೃಹಸಚಿವ ಜಿ.ಪರಮೇಶ್ವರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ’ ಎಂದು ಜನಪ್ರತಿನಿಧಿಗಳ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶಿಸಿದೆ.</p><p>ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹಂದ್ರಾಳು ಗ್ರಾಮದ ಎಚ್.ಆರ್.ನಾಗಭೂಷಣ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಈ ಕುರಿತಂತೆ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣಾಧಿಕಾರಿಗೆ ಆದೇಶಿಸಿದ್ದು, ಎಫ್ಐಆರ್ ಸಿದ್ಧಪಡಿಸಿ ಕಳುಹಿಸುವಂತೆ ನಿರ್ದೇಶಿಸಿದ್ದಾರೆ.</p><p>‘ಪಂದ್ಯದಲ್ಲಿ ಸಚಿವ ಪರಮೇಶ್ವರ್ 2025ರ ಅಕ್ಟೋಬರ್ 19ರಂದು ತುಮಕೂರು ನಗರದಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ವಿರುದ್ಧ ₹500 ಬೆಟ್ಟಿಂಗ್ ಕಟ್ಟುವ ಮೂಲಕ ಅಪರಾಧ ಕೃತ್ಯಗಳನ್ನು ಎಸಗಲು ಸಾರ್ವಜನಿಕವಾಗಿ ಪ್ರಚೋದನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪದೇ ಪದೇ ಅಪರಾಧಿಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಅಂತೆಯೇ, ಈ ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧವೂ ಕರ್ನಾಟಕ ಪೊಲೀಸ್ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಬೇಕು’ ಎಂದು ಕೋರಿ ಖಾಸಗಿ ದೂರು ಸಲ್ಲಿಸಿದ್ದರು.</p><p>ಈ ಮೊದಲು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ಕೊಡಿಗೇನಹಳ್ಳಿ ಠಾಣೆಗೆ ದೂರು ನೀಡಿದ್ದರು. ‘ದೂರು ಆಧಾರರಹಿತ. ಇದರಲ್ಲಿ ಸಾಕ್ಷ್ಯದ ಕೊರತೆ ಇದೆ’ ಎಂಬ ಕಾರಣ ನೀಡಿ ಎಫ್ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದರು. ಈ ಸಂಬಂಧ ದೂರುದಾರರು ಮಧುಗಿರಿ ಡಿವೈಎಸ್ಪಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>