<p><strong>ಬೆಂಗಳೂರು</strong>: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಹೆಚ್ಚಿನ ಬದಲಾವಣೆಗಳೇನು ಆಗುವುದಿಲ್ಲ ಎಂದು ಡಾ. ಜಿ. ಪರಮೇಶ್ವರ ಹೇಳಿದ್ದಾರೆ.</p><p>ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ.</p><p>ಸಿದ್ದರಾಮಯ್ಯ ಅವರು ಮೇ 28ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಡಿಕೆಶಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.</p><p>ಸರ್ಕಾರ ರಚನೆ ಕುರಿತು ಮಾತನಾಡಿರುವ ಪರಮೇಶ್ವರ, ‘ಇದು ಹೊಸ ಸರ್ಕಾರವೇನಲ್ಲ. ಈಗಾಗಲೇ ಇರುವ ಸರ್ಕಾರದ ಮುಂದುವರಿದ ಭಾಗ’ ಎಂದಿದ್ದಾರೆ.</p><p>ಮುಂದುವರಿದು, ‘ಮುಂದಿನ ಐದು ವರ್ಷಗಳಿಗೆ ಈಗಾಗಲೇ ಯೋಜನೆ ರೂಪಿಸಿದ್ದೇವೆ. ಸರ್ಕಾರದಲ್ಲಿ ಕೆಲವು ಬದಲಾವಣೆಗಳಾಗಬಹುದು. ಆದರೆ, ಈ ಹಿಂದಿನ ಹಾದಿಯಲ್ಲೇ ಕೆಲಸ ಮುಂದುವರಿಯುತ್ತದೆ. ಗ್ಯಾರಂಟಿ ಯೋಜನೆಗಳು, ಇತರ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತವೆ’ ಎಂದು ತಿಳಿಸಿದ್ದಾರೆ.</p><p>‘ನೂತನ ಮುಖ್ಯಮಂತ್ರಿ ಮನಸ್ಸಿನಲ್ಲಿ ಹೊಸ ಆಲೋಚನೆಗಳೂ ಇಲ್ಲದಿದ್ದರೆ, ಯಾವುದೇ ಪ್ರಮುಖ ಬದಲಾವಣೆಗಳು ಆಗುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p><p>ತಮ್ಮನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಪರಮೇಶ್ವರ ಧನ್ಯವಾದ ತಿಳಿಸಿದ್ದಾರೆ.</p>.‘ಡಿ.ಕೆ. ಶಿವಕುಮಾರ್ ಎಂಬ ಹೆಸರಿನ ನಾನು...’ ಕೂಲಿ ಕೇಳಿ ಪದವಿಗೇರಿದ ‘ಡಿಕೆ’.ಪದಗ್ರಹಣಕ್ಕೂ ಮುನ್ನ ಯಡಿಯೂರಪ್ಪ-ದೇವೇಗೌಡ ಭೇಟಿಯಾಗಿ ಆಶೀರ್ವಾದ ಪಡೆದ ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಹೆಚ್ಚಿನ ಬದಲಾವಣೆಗಳೇನು ಆಗುವುದಿಲ್ಲ ಎಂದು ಡಾ. ಜಿ. ಪರಮೇಶ್ವರ ಹೇಳಿದ್ದಾರೆ.</p><p>ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಅವರು ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪರಮೇಶ್ವರ್ ಅವರು ಉಪಮುಖ್ಯಮಂತ್ರಿಯಾಗಿ ನೇಮಕಗೊಳ್ಳಲಿದ್ದಾರೆ.</p><p>ಸಿದ್ದರಾಮಯ್ಯ ಅವರು ಮೇ 28ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ಡಿಕೆಶಿ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.</p><p>ಸರ್ಕಾರ ರಚನೆ ಕುರಿತು ಮಾತನಾಡಿರುವ ಪರಮೇಶ್ವರ, ‘ಇದು ಹೊಸ ಸರ್ಕಾರವೇನಲ್ಲ. ಈಗಾಗಲೇ ಇರುವ ಸರ್ಕಾರದ ಮುಂದುವರಿದ ಭಾಗ’ ಎಂದಿದ್ದಾರೆ.</p><p>ಮುಂದುವರಿದು, ‘ಮುಂದಿನ ಐದು ವರ್ಷಗಳಿಗೆ ಈಗಾಗಲೇ ಯೋಜನೆ ರೂಪಿಸಿದ್ದೇವೆ. ಸರ್ಕಾರದಲ್ಲಿ ಕೆಲವು ಬದಲಾವಣೆಗಳಾಗಬಹುದು. ಆದರೆ, ಈ ಹಿಂದಿನ ಹಾದಿಯಲ್ಲೇ ಕೆಲಸ ಮುಂದುವರಿಯುತ್ತದೆ. ಗ್ಯಾರಂಟಿ ಯೋಜನೆಗಳು, ಇತರ ಯೋಜನೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತವೆ’ ಎಂದು ತಿಳಿಸಿದ್ದಾರೆ.</p><p>‘ನೂತನ ಮುಖ್ಯಮಂತ್ರಿ ಮನಸ್ಸಿನಲ್ಲಿ ಹೊಸ ಆಲೋಚನೆಗಳೂ ಇಲ್ಲದಿದ್ದರೆ, ಯಾವುದೇ ಪ್ರಮುಖ ಬದಲಾವಣೆಗಳು ಆಗುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p><p>ತಮ್ಮನ್ನು ಉಪಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಿರುವುದಕ್ಕೆ ಕಾಂಗ್ರೆಸ್ ಹೈಕಮಾಂಡ್, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಪರಮೇಶ್ವರ ಧನ್ಯವಾದ ತಿಳಿಸಿದ್ದಾರೆ.</p>.‘ಡಿ.ಕೆ. ಶಿವಕುಮಾರ್ ಎಂಬ ಹೆಸರಿನ ನಾನು...’ ಕೂಲಿ ಕೇಳಿ ಪದವಿಗೇರಿದ ‘ಡಿಕೆ’.ಪದಗ್ರಹಣಕ್ಕೂ ಮುನ್ನ ಯಡಿಯೂರಪ್ಪ-ದೇವೇಗೌಡ ಭೇಟಿಯಾಗಿ ಆಶೀರ್ವಾದ ಪಡೆದ ಡಿಕೆಶಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>