ಪ್ರಲ್ಹಾದ ಜೋಶಿ ವ್ಯಂಗ್ಯ
ಹುಬ್ಬಳ್ಳಿ: ‘ಕುಣಿಯಲು ಬಾರದವರು ನೆಲ ಡೊಂಕು ಅಂದರಂತೆ ಎಂಬ ಗಾದೆ ರೀತಿ ಆರ್ಥಿಕ ನಿರ್ವಹಣೆ ಮಾಡಲಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಧರಣಿ ಮಾಡಲು ಹೊರಟಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಡಿದರು.
‘ಪೂರ್ವತಯಾರಿ ಇಲ್ಲದೇ ಗ್ಯಾರಂಟಿ ಯೋಜನೆ ಗಳನ್ನು ಘೋಷಿಸಿದರು. ಅದಕ್ಕೆ ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಆರ್ಥಿಕ ಶಿಸ್ತು ಪಾಲಿಸದೇ ಈಗ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದಾರೆ. ಇದರಲ್ಲಿ ರಾಜ್ಯದ ಹಿತವೇನೂ ಇಲ್ಲ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.