<p><strong>ಬೆಂಗಳೂರು:</strong> ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮದ್ಯ ಕುಡಿದು ನೃತ್ಯ ಮಾಡಿದವರ ಗುರುತು ಪತ್ತೆ ಮಾಡಲಾಗಿದ್ದು, ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಜೈಲರ್ ಗೋಪಿನಾಥ್ ಅವರ ದೂರಿನ ಮೇರೆಗೆ ಕಾರ್ತಿಕ್, ಧನಂಜಯ್, ಮಂಜುನಾಥ್, ಬಿ.ಚರಣ್ ರಾವ್ ವಿರುದ್ಧ ಜೈಲು ನಿಯಮಗಳ ಉಲ್ಲಂಘನೆ ಆರೋಪ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. </p>.<p>ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿದ್ದ ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಈ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ಕಾರ್ತಿಕ್ ಹೊರತು ಪಡಿಸಿ ಇತರೆ ಆರೋಪಿಗಳು ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.</p>.<p>ಮಾದನಾಯಕನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾರ್ತಿಕ್ ಒಂದು ವರ್ಷದಿಂದ ಜೈಲಿನಲ್ಲಿದ್ದು, ಜತೆಗೆ ಇತರೆ ಆರೋಪಿಗಳು ಇದ್ದರು. ಆದರೆ, ಮಂಜುನಾಥ್, ಧನಂಜಯ್, ಚರಣ್ರಾವ್ ಈಗಾಗಲೇ ಬಿಡುಗಡೆಯಾಗಿದ್ದಾರೆ. ಈ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅವರ ವಿಳಾಸ ಮತ್ತು ಸಂಪರ್ಕ ಸಂಖ್ಯೆ ನೀಡುವಂತೆ ಜೈಲಿನ ಅಧಿಕಾರಿಗಳಿಗೆ ಕೋರಲಾಗಿದೆ. ಅವರಿಂದ ಬಂದ ಮಾಹಿತಿ ಆಧರಿಸಿ ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಆರೋಪಿಗಳಿಗೆ ಮೊಬೈಲ್ಗಳು ಸಿಕ್ಕಿದ್ದು ಹೇಗೆ? ಯಾವಾಗ ಚಿತ್ರೀಕರಿಸಲಾಯಿತು? ಕೊಟ್ಟವರು ಯಾರು? ಮಾಧ್ಯಮಗಳಿಗೆ ವಿಡಿಯೊಗಳನ್ನು ಹರಿಬಿಟ್ಟವರು ಯಾರು? ಎಂಬುದರ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜೈಲರ್ ಗೋಪಿನಾಥ್ ದೂರಿನಲ್ಲಿ ತಿಳಿಸಿದ್ದಾರೆ. </p>.<p>ಕೈದಿಗಳೇ ವಿಡಿಯೊ ಮಾಡಿ ಹೊರಬಿಟ್ಟಿದ್ದಾರೆ ಎಂಬ ಸಂಶಯದ ಮೇಲೆ ಕೆಲ ಸಜಾಬಂಧಿ ಹಾಗೂ ವಿಚಾರಣಾಧೀನ ಕೈದಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಡಿಯೊ ತುಣುಕುಗಳ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದಾರೆ.</p>.ಪರಪ್ಪನ ಅಗ್ರಹಾರ | ಮದ್ಯ ಕುಡಿದು ಕೈದಿಗಳ ನೃತ್ಯ: ಮತ್ತೊಂದು ವಿಡಿಯೊ ಬಹಿರಂಗ.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ.<p>ಬ್ಯಾರಕ್ನ 7 ಮತ್ತು 8ನೇ ಕೊಠಡಿಯಲ್ಲಿ ವಿಚಾರಣಾಧೀನ ಕೈದಿಗಳು ಮದ್ಯದ ಬಾಟಲ್ ಇಟ್ಟುಕೊಂಡು ಪಾರ್ಟಿ ಹಾಗೂ ನೃತ್ಯ ಮಾಡಿರುವ 1 ನಿಮಿಷ 44 ಸೆಕೆಂಡಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.</p>.<p>ಅತ್ಯಾಚಾರ, ಸರಣಿ ಕೊಲೆಯ ಪಾತಕಿ ಉಮೇಶ್ ರೆಡ್ಡಿ, ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಸಂಘಟನೆಯ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ, ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ತರುಣ್ ರಾಜ್ ಮೊಬೈಲ್ ಬಳಕೆ ಮಾಡಿರುವ ಸಂಬಂಧವೂ ಮೂರು ಎನ್ಸಿಆರ್ ದಾಖಲಾಗಿದೆ. </p>.<p>ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.</p>.<p>ಕೈದಿಗಳಿಗೆ ವಿಶೇಷ ಸೌಲಭ್ಯ, ಮೊಬೈಲ್ ಬಳಕೆಗೆ ಅವಕಾಶ ನೀಡಿದ್ದ ಪ್ರಕರಣದಲ್ಲಿ ಜೈಲಿನ ಸೂಪರಿಂಟೆಂಡೆಂಟ್ ಇಮಾಮ್ಸಾಬ್ ಮ್ಯಾಗೇರಿ ಹಾಗೂ ಸಹಾಯಕ ಸೂಪರಿಂಟೆಂಡೆಂಟ್ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದು, ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು.</p>.<div><blockquote>ಜೈಲಿನ ಘಟನೆಗೆ ಸಂಬಂಧಿಸಿದಂತೆ ಒಂದು ಎಫ್ಐಆರ್ ದಾಖಲಾಗಿದೆ. ಅವಶ್ಯಕತೆಯಿದ್ದರೆ ಮತ್ತೊಂದು ಎಫ್ಐಆರ್ ದಾಖಲಿಸಿಕೊಳ್ಳಲಾಗುವುದು.</blockquote><span class="attribution">– ಸೀಮಾಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮದ್ಯ ಕುಡಿದು ನೃತ್ಯ ಮಾಡಿದವರ ಗುರುತು ಪತ್ತೆ ಮಾಡಲಾಗಿದ್ದು, ನಾಲ್ವರು ವಿಚಾರಣಾಧೀನ ಕೈದಿಗಳ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>ಜೈಲರ್ ಗೋಪಿನಾಥ್ ಅವರ ದೂರಿನ ಮೇರೆಗೆ ಕಾರ್ತಿಕ್, ಧನಂಜಯ್, ಮಂಜುನಾಥ್, ಬಿ.ಚರಣ್ ರಾವ್ ವಿರುದ್ಧ ಜೈಲು ನಿಯಮಗಳ ಉಲ್ಲಂಘನೆ ಆರೋಪ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. </p>.<p>ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾಗಿದ್ದ ಬೇರೆ ಬೇರೆ ಅಪರಾಧ ಪ್ರಕರಣಗಳಲ್ಲಿ ಈ ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪೈಕಿ ಕಾರ್ತಿಕ್ ಹೊರತು ಪಡಿಸಿ ಇತರೆ ಆರೋಪಿಗಳು ಜಾಮೀನು ಪಡೆದು ಬಿಡುಗಡೆಯಾಗಿದ್ದಾರೆ.</p>.<p>ಮಾದನಾಯಕನಹಳ್ಳಿ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾರ್ತಿಕ್ ಒಂದು ವರ್ಷದಿಂದ ಜೈಲಿನಲ್ಲಿದ್ದು, ಜತೆಗೆ ಇತರೆ ಆರೋಪಿಗಳು ಇದ್ದರು. ಆದರೆ, ಮಂಜುನಾಥ್, ಧನಂಜಯ್, ಚರಣ್ರಾವ್ ಈಗಾಗಲೇ ಬಿಡುಗಡೆಯಾಗಿದ್ದಾರೆ. ಈ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅವರ ವಿಳಾಸ ಮತ್ತು ಸಂಪರ್ಕ ಸಂಖ್ಯೆ ನೀಡುವಂತೆ ಜೈಲಿನ ಅಧಿಕಾರಿಗಳಿಗೆ ಕೋರಲಾಗಿದೆ. ಅವರಿಂದ ಬಂದ ಮಾಹಿತಿ ಆಧರಿಸಿ ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.</p>.<p>ಆರೋಪಿಗಳಿಗೆ ಮೊಬೈಲ್ಗಳು ಸಿಕ್ಕಿದ್ದು ಹೇಗೆ? ಯಾವಾಗ ಚಿತ್ರೀಕರಿಸಲಾಯಿತು? ಕೊಟ್ಟವರು ಯಾರು? ಮಾಧ್ಯಮಗಳಿಗೆ ವಿಡಿಯೊಗಳನ್ನು ಹರಿಬಿಟ್ಟವರು ಯಾರು? ಎಂಬುದರ ಕುರಿತು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಜೈಲರ್ ಗೋಪಿನಾಥ್ ದೂರಿನಲ್ಲಿ ತಿಳಿಸಿದ್ದಾರೆ. </p>.<p>ಕೈದಿಗಳೇ ವಿಡಿಯೊ ಮಾಡಿ ಹೊರಬಿಟ್ಟಿದ್ದಾರೆ ಎಂಬ ಸಂಶಯದ ಮೇಲೆ ಕೆಲ ಸಜಾಬಂಧಿ ಹಾಗೂ ವಿಚಾರಣಾಧೀನ ಕೈದಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಡಿಯೊ ತುಣುಕುಗಳ ಬಗ್ಗೆ ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದಾರೆ.</p>.ಪರಪ್ಪನ ಅಗ್ರಹಾರ | ಮದ್ಯ ಕುಡಿದು ಕೈದಿಗಳ ನೃತ್ಯ: ಮತ್ತೊಂದು ವಿಡಿಯೊ ಬಹಿರಂಗ.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಮೊಬೈಲ್, ಟಿ.ವಿ ಸೌಲಭ್ಯ.<p>ಬ್ಯಾರಕ್ನ 7 ಮತ್ತು 8ನೇ ಕೊಠಡಿಯಲ್ಲಿ ವಿಚಾರಣಾಧೀನ ಕೈದಿಗಳು ಮದ್ಯದ ಬಾಟಲ್ ಇಟ್ಟುಕೊಂಡು ಪಾರ್ಟಿ ಹಾಗೂ ನೃತ್ಯ ಮಾಡಿರುವ 1 ನಿಮಿಷ 44 ಸೆಕೆಂಡಿನ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು.</p>.<p>ಅತ್ಯಾಚಾರ, ಸರಣಿ ಕೊಲೆಯ ಪಾತಕಿ ಉಮೇಶ್ ರೆಡ್ಡಿ, ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಸಂಘಟನೆಯ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ, ದುಬೈನಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ತರುಣ್ ರಾಜ್ ಮೊಬೈಲ್ ಬಳಕೆ ಮಾಡಿರುವ ಸಂಬಂಧವೂ ಮೂರು ಎನ್ಸಿಆರ್ ದಾಖಲಾಗಿದೆ. </p>.<p>ನ್ಯಾಯಾಲಯದ ಅನುಮತಿ ಪಡೆದು ಎಫ್ಐಆರ್ ದಾಖಲಿಸಿ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.</p>.<p>ಕೈದಿಗಳಿಗೆ ವಿಶೇಷ ಸೌಲಭ್ಯ, ಮೊಬೈಲ್ ಬಳಕೆಗೆ ಅವಕಾಶ ನೀಡಿದ್ದ ಪ್ರಕರಣದಲ್ಲಿ ಜೈಲಿನ ಸೂಪರಿಂಟೆಂಡೆಂಟ್ ಇಮಾಮ್ಸಾಬ್ ಮ್ಯಾಗೇರಿ ಹಾಗೂ ಸಹಾಯಕ ಸೂಪರಿಂಟೆಂಡೆಂಟ್ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಿದ್ದು, ಕಾರಾಗೃಹದ ಮುಖ್ಯ ಅಧೀಕ್ಷಕ ಕೆ.ಸುರೇಶ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿತ್ತು.</p>.<div><blockquote>ಜೈಲಿನ ಘಟನೆಗೆ ಸಂಬಂಧಿಸಿದಂತೆ ಒಂದು ಎಫ್ಐಆರ್ ದಾಖಲಾಗಿದೆ. ಅವಶ್ಯಕತೆಯಿದ್ದರೆ ಮತ್ತೊಂದು ಎಫ್ಐಆರ್ ದಾಖಲಿಸಿಕೊಳ್ಳಲಾಗುವುದು.</blockquote><span class="attribution">– ಸೀಮಾಂತ್ ಕುಮಾರ್ ಸಿಂಗ್, ನಗರ ಪೊಲೀಸ್ ಕಮಿಷನರ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>