2017ರ ಡಿಸೆಂಬರ್ನಲ್ಲಿ ನಡೆದ ಗಲಭೆಯ ಸಂದರ್ಭ, ಹೊನ್ನಾವರದಲ್ಲಿ ಪರೇಶ ಮೇಸ್ತ ಅವರ ಕೊಲೆಯಾಗಿತ್ತು. ಈ ಪ್ರಕರಣವು ಭಾರಿ ಸಂಚಲನ ಉಂಟು ಮಾಡಿತ್ತು. ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದರು. ಬಳಿಕ ಪಕ್ಷದ ವಿವಿಧ ಹಿರಿಯ ಮುಖಂಡರು ಮೇಸ್ತ ಅವರ ಮನೆಗೆ ಭೇಟಿ ನೀಡಿದ್ದರು. 2018ರ ಫೆ.21ರಂದು ಅಂದಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೂಡ ಬಂದು ಪಾಲಕರಿಗೆ ಸಾಂತ್ವನ ಹೇಳಿದ್ದರು.