ನಿಯಮದಂತೆ ಕಾರ್ಯನಿರ್ವಹಿಸದೇ ಲೋಪ ಎಸಗಿದ ಮಂಡಳಿ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಹಾಗೂ ವಿಷಯ ನಿರ್ವಾಹಕರನ್ನು ಈಗಾಗಲೆ ಅಮಾನತು ಮಾಡಲಾಗಿದೆ. ಅವರ ಸೇವೆಯನ್ನು ಮಾತೃ ಇಲಾಖೆಗೆ ಹಿಂದಿರುಗಿಸಲಾಗಿದೆ. ಹೆಚ್ಚುವರಿ ಮಂಜೂರಾತಿ ನೀಡಿ ಕೈಗೊಂಡಿದ್ದ ₹224 ಕೋಟಿ ವೆಚ್ಚದ 2,374 ಕಾಮಗಾರಿಗಳನ್ನು ರದ್ದು ಮಾಡಲಾಗಿದೆ. ಮುಂದುವರಿದ ಕಾಮಗಾರಿಗಳಿಗೆ ₹150 ಕೋಟಿ ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಸಭಾನಾಯಕ ಎನ್.ಎಸ್. ಬೋಸರಾಜು ಉತ್ತರಿಸಿದರು.