<p><strong>ಮೈಸೂರು:</strong> ನೂತನ ಸಂಸತ್ ಭವನ ಉದ್ಘಾಟನೆಯು ಮೋದಿ ಅವರ ಪಟ್ಟಾಭಿಷೇಕದಂತೆ ಇದ್ದು, ಅಂದಿನ ಘಟನಾವಳಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕಿಸಿದರು.</p><p>ಅಂದಿನ ಕಾರ್ಯಕ್ರಮದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರಿಗೆ ಗೌರವ ಸಿಗಲಿಲ್ಲ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮದಿಂದ ದೂರ ಇಡುವ ಮೂಲಕ ಪ್ರಧಾನಿಯೇ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಇದು ತಳ ಸಮುದಾಯಗಳಿಗೆ ಮಾಡಿದ ಅವಮಾನ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p><p>ಹೊಸ ಸಂಸತ್ತಿನಲ್ಲಿ ರಾಷ್ಟ್ರ ಲಾಂಛನವಾದ ಅಶೋಕ ಚಕ್ರವನ್ನು ಬಿಟ್ಟು ಧರ್ಮ ಲಾಂಛನವನ್ನು ಇಟ್ಟಿದ್ದು ಸರಿಯಲ್ಲ. ಸಂಸತ್ ಭವನದಲ್ಲಿ ಹೋಮ, ಹವನಗಳು ಪುರೋಹಿತಶಾಹಿ ವ್ಯವಸ್ಥೆಯ ಮರುಸ್ಥಾಪನೆಯಂತಿದೆ. ಬಸವೇಶ್ವರರಿಗೂ ಅವಮಾನ ಮಾಡಲಾಗಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನೂತನ ಸಂಸತ್ ಭವನ ಉದ್ಘಾಟನೆಯು ಮೋದಿ ಅವರ ಪಟ್ಟಾಭಿಷೇಕದಂತೆ ಇದ್ದು, ಅಂದಿನ ಘಟನಾವಳಿಗಳು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅವಮಾನ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಟೀಕಿಸಿದರು.</p><p>ಅಂದಿನ ಕಾರ್ಯಕ್ರಮದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರಿಗೆ ಗೌರವ ಸಿಗಲಿಲ್ಲ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕಾರ್ಯಕ್ರಮದಿಂದ ದೂರ ಇಡುವ ಮೂಲಕ ಪ್ರಧಾನಿಯೇ ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಇದು ತಳ ಸಮುದಾಯಗಳಿಗೆ ಮಾಡಿದ ಅವಮಾನ ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p><p>ಹೊಸ ಸಂಸತ್ತಿನಲ್ಲಿ ರಾಷ್ಟ್ರ ಲಾಂಛನವಾದ ಅಶೋಕ ಚಕ್ರವನ್ನು ಬಿಟ್ಟು ಧರ್ಮ ಲಾಂಛನವನ್ನು ಇಟ್ಟಿದ್ದು ಸರಿಯಲ್ಲ. ಸಂಸತ್ ಭವನದಲ್ಲಿ ಹೋಮ, ಹವನಗಳು ಪುರೋಹಿತಶಾಹಿ ವ್ಯವಸ್ಥೆಯ ಮರುಸ್ಥಾಪನೆಯಂತಿದೆ. ಬಸವೇಶ್ವರರಿಗೂ ಅವಮಾನ ಮಾಡಲಾಗಿದೆ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>