ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ ಭದ್ರತಾ ಲೋಪ: ಸಲೂನ್‌ ಸ್ನೇಹಿತನಿಂದ ಮನೋರಂಜನ್‌ಗೆ ಹಣ!

Published 21 ಡಿಸೆಂಬರ್ 2023, 23:30 IST
Last Updated 21 ಡಿಸೆಂಬರ್ 2023, 23:30 IST
ಅಕ್ಷರ ಗಾತ್ರ

ಮೈಸೂರು: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಡಿ.ಮನೋರಂಜನ್‌ಗೆ, ನಗರದ ವಿಜಯನಗರದಲ್ಲಿ ಹೇರ್‌ ಕಟಿಂಗ್ ಸಲೂನ್‌ ನಡೆಸುತ್ತಿರುವ ಸ್ನೇಹಿತ ಸೂರಪ್ಪ ಹಣ ವರ್ಗಾವಣೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

ಹೀಗಾಗಿ ಸೂರಪ್ಪ ಅವರನ್ನು ದೆಹಲಿ ಪೊಲೀಸರು ಎರಡು ದಿನದಿಂದ ವಿಚಾರಣೆಗೊಳ ಪಡಿಸಿದ್ದಾರೆ. ಆರೋಪಿ ಮನೆಯಲ್ಲಿ ದೊರೆತ ಡೈರಿಯಲ್ಲಿರುವ ಮಾಹಿತಿಗಳ ಜಾಡು ಹಿಡಿದು ತನಿಖೆ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿರುದ್ಯೋಗಿಯಾಗಿದ್ದ ಆರೋಪಿಯ ಹಣದ ಮೂಲಗಳ ಬಗ್ಗೆಯೇ ಅಧಿಕಾರಿಗಳು ಗಂಭೀರ ಗಮನ ಹರಿಸಿದ್ದಾರೆ. ಆತನ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ವಿಚಾರಣೆಗೆ ಒಳಪಡಿಸುವ ಪ್ರಯತ್ನಗಳೂ ನಡೆದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT