<p><strong>ನವದೆಹಲಿ:</strong> ‘ಕೇಂದ್ರದ 2026–27ನೇ ಸಾಲಿನ ಬಜೆಟ್ನಲ್ಲಿ ನರೇಗಾ ಯೋಜನೆಗೆ ₹30 ಸಾವಿರ ಕೋಟಿಯಷ್ಟೇ ಅನುದಾನ ನೀಡಲಾಗಿದೆ. ಈ ಅನುದಾನ ಹಂಚಿಕೆ ಅಸಮರ್ಪಕ ಹಾಗೂ ಒಪ್ಪಲು ಸಾಧ್ಯವೇ ಇಲ್ಲ’ ಎಂದು ಸಂಸದೀಯ ಸ್ಥಾಯಿ ಸಮಿತಿ ಅಭಿಪ್ರಾಯಪಟ್ಟಿದೆ. </p>.<p>ಸಂಸದ ಸಪ್ತಗಿರಿ ಶಂಕರ್ ಉಲಾಕಾ ನೇತೃತ್ವದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸ್ಥಾಯಿ ಸಮಿತಿಯ 25ನೇ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಸಮಿತಿ ತರಾಟೆಗೆ ತೆಗೆದುಕೊಂಡಿದೆ. </p>.<p>2026–27ನೇ ಕೇಂದ್ರ ಬಜೆಟ್ನಲ್ಲಿ ನರೇಗಾ ಯೋಜನೆಗೆ ₹30 ಸಾವಿರ ಕೋಟಿ ಅನುದಾನ ನೀಡಲಾಗಿದೆ. ನರೇಗಾ ಯೋಜನೆಯ ಅನೇಕ ಕಾಮಗಾರಿಗಳು ಅಪೂರ್ಣವಾಗಿವೆ ಹಾಗೂ ರಾಜ್ಯಗಳ ಪಾಲು ಬಾಕಿ ಇದೆ. ಈ ಕಾರಣಕ್ಕೆ ಈ ಅನುದಾನ ಮೀಸಲಿಡಲಾಗಿದೆ. </p>.<p>‘2025–26ನೇ ಸಾಲಿನ ಬಜೆಟ್ನಲ್ಲಿ ಇಲಾಖೆಗೆ ₹1,86,995 ಕೋಟಿ ಅನುದಾನ ಹಂಚಿಕೆ ಮಾಡಲಾಗಿತ್ತು. ಇಲಾಖೆ ಈ ವರೆಗೆ ₹99,090 ಕೋಟಿ ಅನುದಾನವನ್ನಷ್ಟೇ ಖರ್ಚು ಮಾಡಲಾಗಿದೆ. ಮಾರ್ಚ್ ಅಂತ್ಯದೊಳಗೆ ಉಳಿದ ಅನುದಾನ ಖರ್ಚು ಮಾಡಲು ಸಾಧ್ಯವೇ’ ಎಂದು ಪ್ರಶ್ನಿಸಿರುವ ಸಮಿತಿ, ‘ಇಲಾಖೆಯ ಈ ಧೋರಣೆಯಿಂದಾಗಿ ಗ್ರಾಮೀಣ ಜನರು ಯೋಜನೆಗಳ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಹೇಳಿದೆ. </p>.<p>‘2026–27ನೇ ಸಾಲಿನಲ್ಲಿ ಇಲಾಖೆಗೆ ₹2,28,768 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಆದರೆ, ಇದರಲ್ಲಿ ವಿಬಿ–ಜಿರಾಮ್ಜಿ ಯೋಜನೆಗೇ ₹95,692 ಕೋಟಿ ಮೀಸಲಿಡಲಾಗಿದೆ. ಗ್ರಾಮೀಣಾಭಿವೃದ್ಧಿಯ ಯೋಜನೆಗಳಾದ ನರೇಗಾ, ಪಿಎಂ ಆವಾಸ್ ಯೋಜನೆ, ಗ್ರಾಮ್ ಸಡಕ್ ಮತ್ತಿತರ ಯೋಜನೆಗಳಿಗೆ ಕನಿಷ್ಠ ಅನುದಾನ ಹಂಚಿಕೆ ಮಾಡಲಾಗಿದೆ. ಹಣದುಬ್ಬರ ಹಾಗೂ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆಯಿಂದಾಗಿ ಈ ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಇಂತಹ ಸಂದರ್ಭದಲ್ಲಿ ಅನುದಾನ ಕಡಿತ ಮಾಡಿರುವುದು ಸರಿಯಲ್ಲ’ ಎಂದು ಸಮಿತಿ ಪ್ರತಿಪಾದಿಸಿದೆ. </p>.<p>‘2025–26ನೇ ಸಾಲಿನಲ್ಲಿ ಕೇಂದ್ರವು ರಾಜ್ಯಗಳಿಗೆ ಕೂಲಿ ಮೊತ್ತ ₹5,940 ಕೋಟಿ ಹಾಗೂ ಸಾಮಗ್ರಿಗಳ ಮೊತ್ತ ₹10,921 ಕೋಟಿ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ವರ್ಷದ ಅಂತ್ಯಕ್ಕೆ ಬಾಕಿ ಮೊತ್ತ ₹25 ಸಾವಿರ ಕೋಟಿಗೆ ಹೆಚ್ಚುವ ಅಂದಾಜು ಇದೆ. ನರೇಗಾ ಯೋಜನೆಗೆ ಈ ವರ್ಷ ಮೀಸಲಿಟ್ಟಿರುವ ಮೊತ್ತದಲ್ಲಿ ಬಹುತೇಕ ಬಾಕಿ ಪಾವತಿಗೆ ಹೋಗಲಿದೆ. ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣವೇ ಇರುವುದಿಲ್ಲ. ಹೀಗಾಗಿ, ನರೇಗಾದಂತಹ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಹಣಕಾಸು ಸಚಿವಾಲಯಕ್ಕೆ ಒತ್ತಡ ಹೇರಬೇಕು’ ಎಂದು ಸಮಿತಿ ಸಲಹೆ ನೀಡಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಕೂಲಿ ಮೊತ್ತ ₹218 ಕೋಟಿ ಹಾಗೂ ಸಾಮಗ್ರಿ ಬಾಕಿ ₹699 ಕೋಟಿ ಬರಬೇಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇಂದ್ರದ 2026–27ನೇ ಸಾಲಿನ ಬಜೆಟ್ನಲ್ಲಿ ನರೇಗಾ ಯೋಜನೆಗೆ ₹30 ಸಾವಿರ ಕೋಟಿಯಷ್ಟೇ ಅನುದಾನ ನೀಡಲಾಗಿದೆ. ಈ ಅನುದಾನ ಹಂಚಿಕೆ ಅಸಮರ್ಪಕ ಹಾಗೂ ಒಪ್ಪಲು ಸಾಧ್ಯವೇ ಇಲ್ಲ’ ಎಂದು ಸಂಸದೀಯ ಸ್ಥಾಯಿ ಸಮಿತಿ ಅಭಿಪ್ರಾಯಪಟ್ಟಿದೆ. </p>.<p>ಸಂಸದ ಸಪ್ತಗಿರಿ ಶಂಕರ್ ಉಲಾಕಾ ನೇತೃತ್ವದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸ್ಥಾಯಿ ಸಮಿತಿಯ 25ನೇ ವರದಿಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯವೈಖರಿಯನ್ನು ಸಮಿತಿ ತರಾಟೆಗೆ ತೆಗೆದುಕೊಂಡಿದೆ. </p>.<p>2026–27ನೇ ಕೇಂದ್ರ ಬಜೆಟ್ನಲ್ಲಿ ನರೇಗಾ ಯೋಜನೆಗೆ ₹30 ಸಾವಿರ ಕೋಟಿ ಅನುದಾನ ನೀಡಲಾಗಿದೆ. ನರೇಗಾ ಯೋಜನೆಯ ಅನೇಕ ಕಾಮಗಾರಿಗಳು ಅಪೂರ್ಣವಾಗಿವೆ ಹಾಗೂ ರಾಜ್ಯಗಳ ಪಾಲು ಬಾಕಿ ಇದೆ. ಈ ಕಾರಣಕ್ಕೆ ಈ ಅನುದಾನ ಮೀಸಲಿಡಲಾಗಿದೆ. </p>.<p>‘2025–26ನೇ ಸಾಲಿನ ಬಜೆಟ್ನಲ್ಲಿ ಇಲಾಖೆಗೆ ₹1,86,995 ಕೋಟಿ ಅನುದಾನ ಹಂಚಿಕೆ ಮಾಡಲಾಗಿತ್ತು. ಇಲಾಖೆ ಈ ವರೆಗೆ ₹99,090 ಕೋಟಿ ಅನುದಾನವನ್ನಷ್ಟೇ ಖರ್ಚು ಮಾಡಲಾಗಿದೆ. ಮಾರ್ಚ್ ಅಂತ್ಯದೊಳಗೆ ಉಳಿದ ಅನುದಾನ ಖರ್ಚು ಮಾಡಲು ಸಾಧ್ಯವೇ’ ಎಂದು ಪ್ರಶ್ನಿಸಿರುವ ಸಮಿತಿ, ‘ಇಲಾಖೆಯ ಈ ಧೋರಣೆಯಿಂದಾಗಿ ಗ್ರಾಮೀಣ ಜನರು ಯೋಜನೆಗಳ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ’ ಎಂದು ಹೇಳಿದೆ. </p>.<p>‘2026–27ನೇ ಸಾಲಿನಲ್ಲಿ ಇಲಾಖೆಗೆ ₹2,28,768 ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ಆದರೆ, ಇದರಲ್ಲಿ ವಿಬಿ–ಜಿರಾಮ್ಜಿ ಯೋಜನೆಗೇ ₹95,692 ಕೋಟಿ ಮೀಸಲಿಡಲಾಗಿದೆ. ಗ್ರಾಮೀಣಾಭಿವೃದ್ಧಿಯ ಯೋಜನೆಗಳಾದ ನರೇಗಾ, ಪಿಎಂ ಆವಾಸ್ ಯೋಜನೆ, ಗ್ರಾಮ್ ಸಡಕ್ ಮತ್ತಿತರ ಯೋಜನೆಗಳಿಗೆ ಕನಿಷ್ಠ ಅನುದಾನ ಹಂಚಿಕೆ ಮಾಡಲಾಗಿದೆ. ಹಣದುಬ್ಬರ ಹಾಗೂ ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆಯಿಂದಾಗಿ ಈ ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಇಂತಹ ಸಂದರ್ಭದಲ್ಲಿ ಅನುದಾನ ಕಡಿತ ಮಾಡಿರುವುದು ಸರಿಯಲ್ಲ’ ಎಂದು ಸಮಿತಿ ಪ್ರತಿಪಾದಿಸಿದೆ. </p>.<p>‘2025–26ನೇ ಸಾಲಿನಲ್ಲಿ ಕೇಂದ್ರವು ರಾಜ್ಯಗಳಿಗೆ ಕೂಲಿ ಮೊತ್ತ ₹5,940 ಕೋಟಿ ಹಾಗೂ ಸಾಮಗ್ರಿಗಳ ಮೊತ್ತ ₹10,921 ಕೋಟಿ ಬಾಕಿ ಉಳಿಸಿಕೊಂಡಿದೆ. ಆರ್ಥಿಕ ವರ್ಷದ ಅಂತ್ಯಕ್ಕೆ ಬಾಕಿ ಮೊತ್ತ ₹25 ಸಾವಿರ ಕೋಟಿಗೆ ಹೆಚ್ಚುವ ಅಂದಾಜು ಇದೆ. ನರೇಗಾ ಯೋಜನೆಗೆ ಈ ವರ್ಷ ಮೀಸಲಿಟ್ಟಿರುವ ಮೊತ್ತದಲ್ಲಿ ಬಹುತೇಕ ಬಾಕಿ ಪಾವತಿಗೆ ಹೋಗಲಿದೆ. ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣವೇ ಇರುವುದಿಲ್ಲ. ಹೀಗಾಗಿ, ನರೇಗಾದಂತಹ ಯೋಜನೆಗಳಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಹಣಕಾಸು ಸಚಿವಾಲಯಕ್ಕೆ ಒತ್ತಡ ಹೇರಬೇಕು’ ಎಂದು ಸಮಿತಿ ಸಲಹೆ ನೀಡಿದೆ. ಕೇಂದ್ರದಿಂದ ಕರ್ನಾಟಕಕ್ಕೆ ಕೂಲಿ ಮೊತ್ತ ₹218 ಕೋಟಿ ಹಾಗೂ ಸಾಮಗ್ರಿ ಬಾಕಿ ₹699 ಕೋಟಿ ಬರಬೇಕಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>