<p><strong>ಬೆಂಗಳೂರು</strong>: ಸದನದಲ್ಲಿ ಆಡಿದ ಮಾತುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿಯ ಎಸ್. ಸುರೇಶ್ ಕುಮಾರ್ ಅವರ ಮನೆಯ ಗೋಡೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಕೀಳುಮಟ್ಟದ ಪೋಸ್ಟರ್ಗಳನ್ನು ಅಂಟಿಸಿ, ತೇಜೋವಧೆ ಮಾಡಿರುವ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸುವುದಾಗಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ರೂಲಿಂಗ್ ನೀಡಿದರು.</p>.<p>ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ‘ನಾನು ಸಾಮಾನ್ಯವಾಗಿ ರೂಢಿಯಲ್ಲಿರುವ ಒಂದು ಮಾತನ್ನು ಹೇಳಿದ್ದೆ. ಬಳಿಕ ಆ ಮಾತನ್ನು ಕಡತದಿಂದ ತೆಗೆಯುವಂತೆ ಮತ್ತು ಅದನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದೂ ಹೇಳಿದ್ದೇನೆ. ಕಡತದಿಂದ ತೆಗೆಯುವಂತೆ ಮುಖ್ಯಮಂತ್ರಿ ಕೂಡ ಹೇಳಿದ್ದರು. ಈ ಪ್ರಕರಣ ಮುಕ್ತಾವಾಯಿತು ಎಂದು ನಾನು ಅಂದುಕೊಂಡಿದ್ದೆ’ ಎಂದರು.</p>.<p>‘ಆದರೆ, ಕೆಲವು ಕಾಂಗ್ರೆಸ್ ಕಾರ್ಯರ್ತರು ಇದೇ 24ರಂದು ನನ್ನ ಮನೆಯ ಗೋಡೆಯ ಮೇಲೆ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಮರುದಿನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ರಾಜಕೀಯ ದುರುದ್ದೇಶದಿಂದ ಈ ರೀತಿ ತೇಜೋವಧೆ ಮಾಡಲಾಗಿದೆ. ಸದನದ ಒಳಗೆ ನಡೆದ ಪ್ರಕರಣವನ್ನು ಉಲ್ಲೇಖಿಸಿ ದೂರು ದಾಖಲಾಗಿರುವುದು ವಿಧಾನಸಭಾ ಸದಸ್ಯನಾಗಿ ನನ್ನ ಕರ್ತವ್ಯ ನಿರ್ವಹಣೆಗೆ ಚ್ಯುತಿ ಉಂಟುಮಾಡಿದೆ. ಈ ವಿಚಾರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರಿದರು.</p>.<p>ಸುರೇಶ್ ಕುಮಾರ್ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ‘ಸದನದಲ್ಲಿ ಮಾತನಾಡಿದ್ದನ್ನು ವಾಪಸ್ ಪಡೆದ ಮೇಲೂ ಮನೆ ಬಳಿ ಹೋಗಿ ಪ್ರತಿಭಟಿಸುವುದು ಸರಿಯಲ್ಲ. ಈಗ ನಿಮ್ಮ ಸರ್ಕಾರ ಇದೆ ಎಂದು ಈ ರೀತಿ ಮಾಡುತ್ತಿದ್ದೀರಾ? ಮುಂದೆ ನಮ್ಮ ಸರ್ಕಾರವೂ ಬರುತ್ತದೆ. ಇಂತಹ ಕೆಟ್ಟ ಸಂಪ್ರದಾಯಕ್ಕೆ ತಡೆ ಹಾಕಬೇಕು’ ಎಂದು ಆಗ್ರಹಿಸಿದರು. </p>.<p>ಘಟನೆಯನ್ನು ಖಂಡಿಸಿದ ಗೃಹ ಸಚಿವ ಜಿ. ಪರಮೇಶ್ವರ ಅವರು, ‘ಯಾರು ಪೋಸ್ಟರ್ ಅಂಟಿಸಿದ್ದಾರೊ ಅವರ ಬಗ್ಗೆ ಖುದ್ದಾಗಿ ನಾನೇ ವಿಚಾರಿಸುತ್ತೇನೆ. ಶಾಸಕರ ಮನೆ ಬಳಿ ಹೋಗಿ ಈ ರೀತಿ ಮಾಡುವುದು ಒಳ್ಳೆಯ ಸಂಪ್ರದಾಯವಲ್ಲ. ದೂರು ನೀಡುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಆದರೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದರು.</p>.<p>‘ಸದನ ಕುಟುಂಬ ಇದ್ದಂತೆ. ಸದನದ ಒಳಗೆ ನಡೆದಿರುವ ವಿಚಾರದಲ್ಲಿ ಹೊರಗಡೆ ಇರುವವರು ಮಧ್ಯಪ್ರವೇಶಿಸುವುದು ಸರಿಯಲ್ಲ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರಕರಣವನ್ನು ಹಕ್ಕುಚ್ಯುತಿ ಸಮಿತಿಗೆ ವಹಿಸುತ್ತೇನೆ’ ಎಂದು ಸಭಾಧ್ಯಕ್ಷರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸದನದಲ್ಲಿ ಆಡಿದ ಮಾತುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿಯ ಎಸ್. ಸುರೇಶ್ ಕುಮಾರ್ ಅವರ ಮನೆಯ ಗೋಡೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಕೀಳುಮಟ್ಟದ ಪೋಸ್ಟರ್ಗಳನ್ನು ಅಂಟಿಸಿ, ತೇಜೋವಧೆ ಮಾಡಿರುವ ಪ್ರಕರಣವನ್ನು ಹಕ್ಕು ಬಾಧ್ಯತಾ ಸಮಿತಿಗೆ ವಹಿಸುವುದಾಗಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ರೂಲಿಂಗ್ ನೀಡಿದರು.</p>.<p>ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸುರೇಶ್ ಕುಮಾರ್, ‘ನಾನು ಸಾಮಾನ್ಯವಾಗಿ ರೂಢಿಯಲ್ಲಿರುವ ಒಂದು ಮಾತನ್ನು ಹೇಳಿದ್ದೆ. ಬಳಿಕ ಆ ಮಾತನ್ನು ಕಡತದಿಂದ ತೆಗೆಯುವಂತೆ ಮತ್ತು ಅದನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದೂ ಹೇಳಿದ್ದೇನೆ. ಕಡತದಿಂದ ತೆಗೆಯುವಂತೆ ಮುಖ್ಯಮಂತ್ರಿ ಕೂಡ ಹೇಳಿದ್ದರು. ಈ ಪ್ರಕರಣ ಮುಕ್ತಾವಾಯಿತು ಎಂದು ನಾನು ಅಂದುಕೊಂಡಿದ್ದೆ’ ಎಂದರು.</p>.<p>‘ಆದರೆ, ಕೆಲವು ಕಾಂಗ್ರೆಸ್ ಕಾರ್ಯರ್ತರು ಇದೇ 24ರಂದು ನನ್ನ ಮನೆಯ ಗೋಡೆಯ ಮೇಲೆ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಮರುದಿನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ರಾಜಕೀಯ ದುರುದ್ದೇಶದಿಂದ ಈ ರೀತಿ ತೇಜೋವಧೆ ಮಾಡಲಾಗಿದೆ. ಸದನದ ಒಳಗೆ ನಡೆದ ಪ್ರಕರಣವನ್ನು ಉಲ್ಲೇಖಿಸಿ ದೂರು ದಾಖಲಾಗಿರುವುದು ವಿಧಾನಸಭಾ ಸದಸ್ಯನಾಗಿ ನನ್ನ ಕರ್ತವ್ಯ ನಿರ್ವಹಣೆಗೆ ಚ್ಯುತಿ ಉಂಟುಮಾಡಿದೆ. ಈ ವಿಚಾರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರಿದರು.</p>.<p>ಸುರೇಶ್ ಕುಮಾರ್ ಬೆಂಬಲಕ್ಕೆ ನಿಂತ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ‘ಸದನದಲ್ಲಿ ಮಾತನಾಡಿದ್ದನ್ನು ವಾಪಸ್ ಪಡೆದ ಮೇಲೂ ಮನೆ ಬಳಿ ಹೋಗಿ ಪ್ರತಿಭಟಿಸುವುದು ಸರಿಯಲ್ಲ. ಈಗ ನಿಮ್ಮ ಸರ್ಕಾರ ಇದೆ ಎಂದು ಈ ರೀತಿ ಮಾಡುತ್ತಿದ್ದೀರಾ? ಮುಂದೆ ನಮ್ಮ ಸರ್ಕಾರವೂ ಬರುತ್ತದೆ. ಇಂತಹ ಕೆಟ್ಟ ಸಂಪ್ರದಾಯಕ್ಕೆ ತಡೆ ಹಾಕಬೇಕು’ ಎಂದು ಆಗ್ರಹಿಸಿದರು. </p>.<p>ಘಟನೆಯನ್ನು ಖಂಡಿಸಿದ ಗೃಹ ಸಚಿವ ಜಿ. ಪರಮೇಶ್ವರ ಅವರು, ‘ಯಾರು ಪೋಸ್ಟರ್ ಅಂಟಿಸಿದ್ದಾರೊ ಅವರ ಬಗ್ಗೆ ಖುದ್ದಾಗಿ ನಾನೇ ವಿಚಾರಿಸುತ್ತೇನೆ. ಶಾಸಕರ ಮನೆ ಬಳಿ ಹೋಗಿ ಈ ರೀತಿ ಮಾಡುವುದು ಒಳ್ಳೆಯ ಸಂಪ್ರದಾಯವಲ್ಲ. ದೂರು ನೀಡುವ ಹಕ್ಕು ಎಲ್ಲರಿಗೂ ಇದೆ. ಅದನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಆದರೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇನೆ’ ಎಂದರು.</p>.<p>‘ಸದನ ಕುಟುಂಬ ಇದ್ದಂತೆ. ಸದನದ ಒಳಗೆ ನಡೆದಿರುವ ವಿಚಾರದಲ್ಲಿ ಹೊರಗಡೆ ಇರುವವರು ಮಧ್ಯಪ್ರವೇಶಿಸುವುದು ಸರಿಯಲ್ಲ. ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರಕರಣವನ್ನು ಹಕ್ಕುಚ್ಯುತಿ ಸಮಿತಿಗೆ ವಹಿಸುತ್ತೇನೆ’ ಎಂದು ಸಭಾಧ್ಯಕ್ಷರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>