ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಜನಾರ್ದನ ರೆಡ್ಡಿ ಅವರನ್ನು ಚುನಾವಣಾ ರಣತಂತ್ರದ ಭಾಗವಾಗಿಯೇ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಮರ್ಥಿಸಿಕೊಂಡರು.
ರೆಡ್ಡಿ ವಿರುದ್ಧ ಇರುವ ಪ್ರಕರಣಗಳನ್ನು ಅವರೇ ಎದುರಿಸಲಿದ್ದಾರೆ. ಇವರ ಸೇರ್ಪಡೆ ಚುನಾವಣಾ ಯುದ್ಧ ನೀತಿಯ ಭಾಗವಾಗಿದೆ. ರಾಜ್ಯಸಭಾ ಚುನಾವಣೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೆಡ್ಡಿಯವರನ್ನು ಭೇಟಿ ಆಗಿಲ್ಲವೇ? ಅವರ ಪಕ್ಷದ ಅಭ್ಯರ್ಥಿ ಪರವಾಗಿ ಮತ ಹಾಕಿಸಿಕೊಂಡಿಲ್ಲವೇ ಎಂದು ಪ್ರಶ್ನಿಸಿದರು.