<p><strong>ಬೆಂಗಳೂರು</strong>: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠವು ಕರ್ನಾಟಕ ಗೋವಾ ಗಡಿ ಭಾಗದ ಕಾನಕೋಣ ಸಮೀಪದ ಪರ್ತಗಾಳಿಯಲ್ಲಿ ನಿರ್ಮಿಸಿರುವ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆ ಹಾಗೂ ರಾಮಾಯಣ ವನ ನ.28ರಂದು ಜನಾರ್ಪಣೆಗೊಳ್ಳಲಿದೆ.</p>.<p>ಐದೂವರೆ ಶತಮಾನದ ಇತಿಹಾಸ ಹೊಂದಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮೂಲ ಮಠದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಂದು ಮಧ್ಯಾಹ್ನ 3.50ಕ್ಕೆ ಉದ್ಘಾಟಿಸುವರು ಎಂದು ಕಾರ್ಯಕ್ರಮ ಸಮಿತಿಯ ಸಂಚಾಲಕ ಪ್ರದೀಪ್ ಜಿ.ಪೈ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>13ನೇ ಶತಮಾನದಲ್ಲಿ ಮಧ್ವಾಚಾರ್ಯರು ಸ್ಥಾಪಿಸಿದ ಮಠವಿದು. ಸದ್ಯ ದಕ್ಷಿಣ ಗೋವಾದ ಪರ್ತಗಾಳಿ ಗ್ರಾಮದ ಕುಶಾವತಿ ನದಿಯ ದಡದಲ್ಲಿರುವ ಪ್ರಧಾನ ಮಠದ ಆವರಣದಲ್ಲಿ ಸುಮಾರು ₹16 ಕೋಟಿ ವೆಚ್ಚದಲ್ಲಿ ಭಾರತದಲ್ಲಿಯೇ ಅತಿ ಎತ್ತರದ ರಾಮನ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ. ಇದರೊಟ್ಟಿಗೆ ರಾಮಾಯಣ ಉದ್ಯಾನ, 3ಡಿ ಮ್ಯಾಪಿಂಗ್, ವಿಶಾಲ ಸಭಾಂಗಣ, ವಿಶ್ವ ದರ್ಜೆಯ ಬಹು ಬಳಕೆಯ ಕಟ್ಟಡ, ಮ್ಯೂಸಿಯಂ ಅನ್ನು ರೂಪಿಸಲಾಗಿದೆ ಎಂದು ಹೇಳಿದರು.</p>.<p>ಮಠದ 24ನೇ ಪೀಠಾಧ್ಯಕ್ಷರಾದ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಮಾರ್ಗದರ್ಶನದಲ್ಲಿಯೇ 550ನೇ ವರ್ಷದ ಆಚರಣೆ, ಧಾರ್ಮಿಕ ಕಾರ್ಯಕ್ರಮಗಳು ನ.27ರಂದು ಆರಂಭಗೊಂಡು ಡಿ.7ರವರೆಗೂ ಪರ್ತಗಾಳಿಯಲ್ಲಿ ಇರಲಿವೆ. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು</p>.<p>ಮಠದ 550 ನೇ ವರ್ಷದ ಸಂದರ್ಭದಲ್ಲಿ ವೇದಿಕ್ ಪಾಠ ಶಾಲೆ ನಿರ್ಮಿಸಿ, ಗುರುಕುಲ ಮಾದರಿಯಲ್ಲಿ 12 ವರ್ಷ ಶಿಕ್ಷಣವನ್ನು ನೀಡಲು ಮಠ ಮುಂದಾಗಿದೆ. 1 ಲಕ್ಷ ಚದರಡಿ ಪ್ರದೇಶದಲ್ಲಿ ಗುರುಕುಲ ವಿದ್ಯಾಪೀಠ ಕೆಲಸವೂ ಶುರುವಾಗಿದೆ ಎಂದು ಹೇಳಿದರು.</p>.<p>ಸಮಿತಿಯ ಪ್ರಮುಖರಾದ ಅಮರನಾಥ ಕಾಮತ್, ಅಣ್ಣಪ್ಪ ಕಾಮತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠವು ಕರ್ನಾಟಕ ಗೋವಾ ಗಡಿ ಭಾಗದ ಕಾನಕೋಣ ಸಮೀಪದ ಪರ್ತಗಾಳಿಯಲ್ಲಿ ನಿರ್ಮಿಸಿರುವ 77 ಅಡಿ ಎತ್ತರದ ರಾಮನ ಕಂಚಿನ ಪ್ರತಿಮೆ ಹಾಗೂ ರಾಮಾಯಣ ವನ ನ.28ರಂದು ಜನಾರ್ಪಣೆಗೊಳ್ಳಲಿದೆ.</p>.<p>ಐದೂವರೆ ಶತಮಾನದ ಇತಿಹಾಸ ಹೊಂದಿರುವ ಗೋಕರ್ಣ ಪರ್ತಗಾಳಿ ಜೀವೋತ್ತಮ ಮೂಲ ಮಠದಲ್ಲಿ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಂದು ಮಧ್ಯಾಹ್ನ 3.50ಕ್ಕೆ ಉದ್ಘಾಟಿಸುವರು ಎಂದು ಕಾರ್ಯಕ್ರಮ ಸಮಿತಿಯ ಸಂಚಾಲಕ ಪ್ರದೀಪ್ ಜಿ.ಪೈ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>13ನೇ ಶತಮಾನದಲ್ಲಿ ಮಧ್ವಾಚಾರ್ಯರು ಸ್ಥಾಪಿಸಿದ ಮಠವಿದು. ಸದ್ಯ ದಕ್ಷಿಣ ಗೋವಾದ ಪರ್ತಗಾಳಿ ಗ್ರಾಮದ ಕುಶಾವತಿ ನದಿಯ ದಡದಲ್ಲಿರುವ ಪ್ರಧಾನ ಮಠದ ಆವರಣದಲ್ಲಿ ಸುಮಾರು ₹16 ಕೋಟಿ ವೆಚ್ಚದಲ್ಲಿ ಭಾರತದಲ್ಲಿಯೇ ಅತಿ ಎತ್ತರದ ರಾಮನ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ. ಇದರೊಟ್ಟಿಗೆ ರಾಮಾಯಣ ಉದ್ಯಾನ, 3ಡಿ ಮ್ಯಾಪಿಂಗ್, ವಿಶಾಲ ಸಭಾಂಗಣ, ವಿಶ್ವ ದರ್ಜೆಯ ಬಹು ಬಳಕೆಯ ಕಟ್ಟಡ, ಮ್ಯೂಸಿಯಂ ಅನ್ನು ರೂಪಿಸಲಾಗಿದೆ ಎಂದು ಹೇಳಿದರು.</p>.<p>ಮಠದ 24ನೇ ಪೀಠಾಧ್ಯಕ್ಷರಾದ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ಮಾರ್ಗದರ್ಶನದಲ್ಲಿಯೇ 550ನೇ ವರ್ಷದ ಆಚರಣೆ, ಧಾರ್ಮಿಕ ಕಾರ್ಯಕ್ರಮಗಳು ನ.27ರಂದು ಆರಂಭಗೊಂಡು ಡಿ.7ರವರೆಗೂ ಪರ್ತಗಾಳಿಯಲ್ಲಿ ಇರಲಿವೆ. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದರು</p>.<p>ಮಠದ 550 ನೇ ವರ್ಷದ ಸಂದರ್ಭದಲ್ಲಿ ವೇದಿಕ್ ಪಾಠ ಶಾಲೆ ನಿರ್ಮಿಸಿ, ಗುರುಕುಲ ಮಾದರಿಯಲ್ಲಿ 12 ವರ್ಷ ಶಿಕ್ಷಣವನ್ನು ನೀಡಲು ಮಠ ಮುಂದಾಗಿದೆ. 1 ಲಕ್ಷ ಚದರಡಿ ಪ್ರದೇಶದಲ್ಲಿ ಗುರುಕುಲ ವಿದ್ಯಾಪೀಠ ಕೆಲಸವೂ ಶುರುವಾಗಿದೆ ಎಂದು ಹೇಳಿದರು.</p>.<p>ಸಮಿತಿಯ ಪ್ರಮುಖರಾದ ಅಮರನಾಥ ಕಾಮತ್, ಅಣ್ಣಪ್ಪ ಕಾಮತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>