<p><strong>ಬೆಂಗಳೂರು</strong>: ‘ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಆಗಿದೆ ಎಂದು ಬಸವರಾಜ ರಾಯರಡ್ಡಿ ಯಾವ ಅರ್ಥದಲ್ಲಿ ಹೇಳಿದ್ದಾರೆಂದು ಅವರೇ ವಿವರಣೆ ನೀಡಬೇಕು. ಭ್ರಷ್ಟಾಚಾರದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎನ್ನುವುದನ್ನೂ ಅವರು ಹೇಳಬೇಕಿತ್ತು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಯರಡ್ಡಿ ಅವರ ಮಾತಿನಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಅವರ ಹೇಳಿಕೆಯನ್ನು ಪಕ್ಷವು ಗಮನಿಸಿದೆ. ಯಾರೂ ಪಕ್ಷಕ್ಕಿಂತ ದೊಡ್ಡವರಿಲ್ಲ’ ಎಂದರು.</p>.<p>‘ರಾಯರಡ್ಡಿ ಹಿರಿಯರು. ಯಾರು ಎಷ್ಟೆಷ್ಟು ಹಣ ಪಡೆದಿದ್ದಾರೆ ಎಂದೂ ಹೇಳಬೇಕಲ್ಲವೇ’ ಎಂದೂ ಅಸಮಾಧಾನ ಹೊರಹಾಕಿದರು.</p>.<p>‘ಭ್ರಷ್ಟಾಚಾರ ನಡೆದಿದೆ ಎಂದಿಲ್ಲ’: ‘ಭ್ರಷ್ಟಾಚಾರ ನಡೆದಿದೆ ಎಂದು ಮಾಧ್ಯಮಗಳ ಮುಂದೆ ರಾಯರಡ್ಡಿ ಹೇಳಿಲ್ಲ. ಅವರು ಸಾಮಾನ್ಯವಾಗಿ ಚರ್ಚೆ ಮಾಡಿರಬಹುದು. ಹೀಗಿರುವಾಗ ಕ್ರಮ ತೆಗೆದುಕೊಳ್ಳುವ ವಿಚಾರ ಎಲ್ಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ಒನ್ ಆಗಿದೆ ಎಂದು ಬಸವರಾಜ ರಾಯರಡ್ಡಿ ಯಾವ ಅರ್ಥದಲ್ಲಿ ಹೇಳಿದ್ದಾರೆಂದು ಅವರೇ ವಿವರಣೆ ನೀಡಬೇಕು. ಭ್ರಷ್ಟಾಚಾರದಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಎನ್ನುವುದನ್ನೂ ಅವರು ಹೇಳಬೇಕಿತ್ತು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಹೇಳಿದರು.</p>.<p>ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಯರಡ್ಡಿ ಅವರ ಮಾತಿನಿಂದ ಸರ್ಕಾರಕ್ಕೆ ಮುಜುಗರವಾಗಿದೆ. ಅವರ ಹೇಳಿಕೆಯನ್ನು ಪಕ್ಷವು ಗಮನಿಸಿದೆ. ಯಾರೂ ಪಕ್ಷಕ್ಕಿಂತ ದೊಡ್ಡವರಿಲ್ಲ’ ಎಂದರು.</p>.<p>‘ರಾಯರಡ್ಡಿ ಹಿರಿಯರು. ಯಾರು ಎಷ್ಟೆಷ್ಟು ಹಣ ಪಡೆದಿದ್ದಾರೆ ಎಂದೂ ಹೇಳಬೇಕಲ್ಲವೇ’ ಎಂದೂ ಅಸಮಾಧಾನ ಹೊರಹಾಕಿದರು.</p>.<p>‘ಭ್ರಷ್ಟಾಚಾರ ನಡೆದಿದೆ ಎಂದಿಲ್ಲ’: ‘ಭ್ರಷ್ಟಾಚಾರ ನಡೆದಿದೆ ಎಂದು ಮಾಧ್ಯಮಗಳ ಮುಂದೆ ರಾಯರಡ್ಡಿ ಹೇಳಿಲ್ಲ. ಅವರು ಸಾಮಾನ್ಯವಾಗಿ ಚರ್ಚೆ ಮಾಡಿರಬಹುದು. ಹೀಗಿರುವಾಗ ಕ್ರಮ ತೆಗೆದುಕೊಳ್ಳುವ ವಿಚಾರ ಎಲ್ಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>