ಭಾನುವಾರ ಸಿದ್ಧಾರೂಢ ಮಠದಲ್ಲಿ ಗೋ ಪೂಜೆ ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ತಾಲ್ಲೂಕಿಗೆ ಒಂದೊಂದು ಪಶು ಸಂಜೀವಿನಿ ಆಂಬುಲೆನ್ಸ್ ನೀಡಲಾಗುವುದು. ಕರೆ ಮಾಡಿದ ತಕ್ಷಣ ಪಶು ವೈದ್ಯರು ಆಂಬುಲೆನ್ಸ್'ನಲ್ಲಿ ಸ್ಕ್ಯಾನಿಂಗ್ ಯಂತ್ರದ ಜೊತೆ ಮನೆ ಬಾಗಿಲಿಗೆ ತೆರಳಿ ಪಶುಗಳಿಗೆ ಚಿಕಿತ್ಸೆ ನೀಡಲಿದ್ದಾರೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಎರಡು-ಮೂರು ತಿಂಗಳಲ್ಲಿ ಯೋಜನೆ ಜಾರಿಗೆ ಬರಲಿದೆ ಎಂದರು.