<p><strong>ಪಾವಗಡ:</strong> ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯು ವಿದ್ಯಾರ್ಥಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಇದರಿಂದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.</p>.<p>ತಾಲ್ಲೂಕಿನ ಬುಡ್ಡಾರೆಡ್ಡಿಹಳ್ಳಿ ಶ್ರೀನಿವಾಸ್ ಎಂಬುವರ ಪುತ್ರ ಮಹೇಂದ್ರ (18) ಮೃತರು. ಬಸ್ ಅಪಘಾತದಲ್ಲಿ ತಲೆ ಹಾಗೂ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವಿಕ್ಟೋರಿಯಾ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು.</p>.<p>ಮಹೇಂದ್ರ ಚಿಕಿತ್ಸೆಗೆ ಸುಮಾರು ₹10 ಲಕ್ಷದಿಂದ ₹15 ಲಕ್ಷ ವೆಚ್ಚವಾಗುತ್ತದೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ತಿಳಿಸಲಾಗಿತ್ತು. ತಾಲ್ಲೂಕಿನ ಸಂಘ ಸಂಸ್ಥೆಗಳು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಹಣ ಸಂಗ್ರಹಿಸಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ದ್ವಿತೀಯ ಪಿಯು ವಿದ್ಯಾರ್ಥಿ ಶನಿವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಇದರಿಂದ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.</p>.<p>ತಾಲ್ಲೂಕಿನ ಬುಡ್ಡಾರೆಡ್ಡಿಹಳ್ಳಿ ಶ್ರೀನಿವಾಸ್ ಎಂಬುವರ ಪುತ್ರ ಮಹೇಂದ್ರ (18) ಮೃತರು. ಬಸ್ ಅಪಘಾತದಲ್ಲಿ ತಲೆ ಹಾಗೂ ಬೆನ್ನು ಮೂಳೆಗೆ ಪೆಟ್ಟಾಗಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ವಿಕ್ಟೋರಿಯಾ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಅಲ್ಲಿಂದ ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿತ್ತು.</p>.<p>ಮಹೇಂದ್ರ ಚಿಕಿತ್ಸೆಗೆ ಸುಮಾರು ₹10 ಲಕ್ಷದಿಂದ ₹15 ಲಕ್ಷ ವೆಚ್ಚವಾಗುತ್ತದೆ ಎಂದು ಖಾಸಗಿ ಆಸ್ಪತ್ರೆಯಲ್ಲಿ ತಿಳಿಸಲಾಗಿತ್ತು. ತಾಲ್ಲೂಕಿನ ಸಂಘ ಸಂಸ್ಥೆಗಳು, ಕಾಲೇಜಿನ ವಿದ್ಯಾರ್ಥಿಗಳು, ಸಿಬ್ಬಂದಿ ಹಣ ಸಂಗ್ರಹಿಸಿ ಚಿಕಿತ್ಸೆಗೆ ಕಳುಹಿಸಿಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>