ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾವಗಡ: ತಹಶೀಲ್ದಾರ್‌ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

Last Updated 24 ಫೆಬ್ರುವರಿ 2023, 22:15 IST
ಅಕ್ಷರ ಗಾತ್ರ

ಪಾವಗಡ: ಇಲ್ಲಿನ ಗ್ರೇಡ್ 2 ತಹಶೀಲ್ದಾರ್ ಸುಮತಿ ಅವರ ವಿರುದ್ಧ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಜಾತಿ ನಿಂದನೆ ಪ್ರಕರಣ ಶುಕ್ರವಾರ ದಾಖಲಾಗಿದೆ.

ತಾಲ್ಲೂಕಿನ ಮಂಗಳವಾಡ ಗ್ರಾಮದ ಹನುಮಂತರಾಯ ಎಂಬುವರು ಭೂರಹಿತ ದೃಢೀಕರಣ ಪತ್ರ ಮತ್ತು ಕೃಷಿ ದೃಢೀಕರಣ ಪತ್ರ ಕೋರಿ ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ತಹಶೀಲ್ದಾರ್‌ ಅವರು ಭೂರಹಿತ ದೃಢೀಕರಣ ಪತ್ರ ನೀಡಲಾಗುವುದಿಲ್ಲ ಎಂದು ಫೆ. 21ರಂದು ಅರ್ಜಿಯನ್ನು ವಜಾಗೊಳಿಸಿದ್ದರು.

ಈ ಬಗ್ಗೆ ತಹಶೀಲ್ದಾರ್ ಅವರನ್ನು ಪ್ರಶ್ನಿಸಿದಾಗ, ‘ನೀನು ವಿಧಾನಸೌಧಕ್ಕಾದರೂ ಹೋಗು; ಎಲ್ಲಿಗಾದರೂ ಹೋಗು. ದೃಢೀಕರಣ ಪತ್ರ ಕೊಡಲು ಬರುವುದಿಲ್ಲ’ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂದು ಹನುಮಂತರಾಯ ದೂರಿನಲ್ಲಿ ತಿಳಿಸಿದ್ದಾರೆ.

‘ಆದಿ ಕರ್ನಾಟಕ ಸಮುದಾಯಕ್ಕೆ ಸೇರಿದ ಫಲಾನುಭವಿಗಳು ಸರ್ಕಾರಿ ಸೌಲಭ್ಯ ಪಡೆಯಲು ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದೃಢೀಕರಣ ಪತ್ರಗಳನ್ನು ಕೋರಿ ಅರ್ಜಿ ಸಲ್ಲಿಸಿದರೂ ನೀಡುತ್ತಿಲ್ಲ. ನನ್ನ ಅರ್ಜಿ ವಜಾ ಮಾಡಿರುವ ಬಗ್ಗೆ ಹಿಂಬರಹ ನೀಡಿ ಅಥವಾ ಸರ್ಕಾರಿ ಆದೇಶ ತೋರಿಸಿ ಎಂದು ಕೇಳಿದ್ದಕ್ಕೆ ತಹಶೀಲ್ದಾರ್ ಕಚೇರಿಯಲ್ಲಿಯೇ ಜಾತಿ ನಿಂದನೆ ಮಾಡಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT