ಏನಾಗಿತ್ತು?
ಅಂದು ರಾತ್ರಿ ಲಾರಿಯಲ್ಲಿ ಬಂದಿದ್ದ ನಕ್ಸಲರು
ಆಂಧ್ರಪ್ರದೇಶ–ಕರ್ನಾಟಕದ ಗಡಿ ಭಾಗದಲ್ಲಿ ಹೆಚ್ಚಾಗಿದ್ದ ನಕ್ಸಲರ ಹಾವಳಿ ನಿಗ್ರಹಿಸಲು ನಕ್ಸಲ್ ನಿಗ್ರಹ ಪಡೆ ವೆಂಕಟಮ್ಮನಹಳ್ಳಿಯಲ್ಲಿ ಬಿಡಾರ ಹೂಡಿತ್ತು. 2005ರ ಫೆಬ್ರವರಿ 11ರಂದು ರಾತ್ರಿ ಲಾರಿಯಲ್ಲಿ ಬಂದಿಳಿದ ನಕ್ಸಲರ ಗುಂಪು ವೆಂಕಟಮ್ಮನಹಳ್ಳಿ ಶಾಲೆಯ ಆವರಣದಲ್ಲಿದ್ದ ಪೊಲೀಸ್ ಕ್ಯಾಂಪ್ ಮೇಲೆ ಏಕಾಏಕಿ ದಾಳಿ ನಡೆಸಿತ್ತು.
ಕ್ಯಾಂಪ್ಗೆ ನುಗ್ಗಿದ ನಕ್ಸಲೀಯರು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ದೋಚಿದ ನಂತರ ಪೊಲೀಸರ ಮೇಲೆ ಗುಂಡಿನ ಮಳೆಗರೆದಿದ್ದರು. ದಾಳಿಯಲ್ಲಿ ಏಳು ಪೊಲೀಸರು ಮತ್ತು ಒಬ್ಬ ನಾಗರಿಕ ಸ್ಥಳದಲ್ಲಿಯೇ ಮೃತಪಟ್ಟಿದ್ದರು.
ಪೊಲೀಸರು ನ್ಯಾಯಾಲಯಕ್ಕೆ ಹೊಸದಾಗಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯಲ್ಲಿ 42 ಆರೋಪಿಗಳನ್ನು ಹೆಸರಿಸಲಾಗಿತ್ತು. ಈ ಪ್ರಕರಣದ 11ನೇ ಆರೋಪಿ, ಕ್ರಾಂತಿಕಾರಿ ಗಾಯಕ ಗದ್ದರ್ 2019ರ ನವೆಂಬರ್ನಲ್ಲಿ ಪಾವಗಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಇತ್ತೀಚೆಗೆ ಅವರು ಮೃತಪಟ್ಟಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ವರವರರಾವ್ ಅವರನ್ನು ಮಹಾರಾಷ್ಟ್ರದ ಜೈಲಿನಿಂದ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.