ಕಥಾ ನಿರೂಪಕ ವಿಕ್ರಂ ಶ್ರೀಧರ್, ಗಾಂಧಿ ಕಥೆಗಳ ಮೂಲಕ ಮಕ್ಕಳಿಗೆ ಅವರ ಜೀವನದ ಮೌಲ್ಯಗಳನ್ನು ಹೇಳಿದರು. ಗಾಂಧಿ ಸ್ಮಾರಕ ನಿಧಿಯ ಖಜಾಂಚಿ ಎಚ್.ಬಿ.ದಿನೇಶ್ ಪ್ರತಿಜ್ಞಾ ವಿಧಿ ಬೋಧಿಸಿದರು. ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ. ಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಿಶುಕುಮಾರ್, ಕಾರ್ಯದರ್ಶಿ ಎಂ.ಸಿ.ನರೇಂದ್ರ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಎನ್ಎಸ್ಎಸ್ ಅಧಿಕಾರಿ ಎಚ್.ಜಿ.ಗೋವಿಂದೇಗೌಡ ಉಪಸ್ಥಿತರಿದ್ದರು.