ಪ್ರಶಾಂತ ಅವರ ಹೃದಯ, ಕಿಡ್ನಿ, ಲಿವರ್, ಕಣ್ಣು ಮತ್ತು ಚರ್ಮ ಸೇರಿದಂತೆ ಇತರ ಅಂಗಾಂಗಗಳು ಇನ್ನೊಬ್ಬರಿಗೆ ಕಸಿ ಮಾಡುವಷ್ಟು ಆರೋಗ್ಯವಾಗಿವೆ. ಸದ್ಯ ಅವರನ್ನು ಕೆಎಲ್ಇಎಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗುವುದು. ಅಂಗಾಂಗಗಳನ್ನು ಹೊರತೆಗೆದು ಅಗತ್ಯವಿರುವ ವ್ಯಕ್ತಿಗಳಿಗೆ ರವಾನಿಸಲಾಗುವುದು. ನಂತರ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ವೈದ್ಯರು ತಿಳಿಸಿದರು.