<p><strong>ಬೆಂಗಳೂರು:</strong> "ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನಿರ್ದೇಶಿಸಬೇಕು" ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.</p><p>ಹಗರಣದ ನಾಲ್ಕನೇ ಆರೋಪದ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್ ಕಸ್ಟಡಿ ಮುಕ್ತಾಯವಾದ ಕಾರಣ ಶನಿವಾರ ಅವರನ್ನು, "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು.</p><p>ಈ ವೇಳೆ ಪ್ರಜ್ವಲ್ ಪರ ವಕೀಲ ಜಿ.ಅರುಣ್ ಅವರ ಮನವಿಯನ್ನು ನ್ಯಾಯಾಧೀಶರು ಆಲಿಸಿದರು. "ನಿಮ್ಮ ಈ ಮನವಿಯನ್ನು ಜೈಲು ಅಧಿಕಾರಿಗಳಿಗೆ ನೀಡಿ. ಅವರು ಅವಕಾಶ ನೀಡದೇ ಇದ್ದಲ್ಲಿ ವಿಚಾರಣೆ ನಡೆಸೋಣ" ಎಂದು ಸೂಚಿಸಿದರು.</p><p>ಪ್ರಜ್ವಲ್ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> "ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ನಿರ್ದೇಶಿಸಬೇಕು" ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.</p><p>ಹಗರಣದ ನಾಲ್ಕನೇ ಆರೋಪದ ಪ್ರಕರಣದಲ್ಲಿ ಐದು ದಿನಗಳ ಪೊಲೀಸ್ ಕಸ್ಟಡಿ ಮುಕ್ತಾಯವಾದ ಕಾರಣ ಶನಿವಾರ ಅವರನ್ನು, "ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ"ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ಅವರ ಮುಂದೆ ಹಾಜರು ಪಡಿಸಲಾಯಿತು.</p><p>ಈ ವೇಳೆ ಪ್ರಜ್ವಲ್ ಪರ ವಕೀಲ ಜಿ.ಅರುಣ್ ಅವರ ಮನವಿಯನ್ನು ನ್ಯಾಯಾಧೀಶರು ಆಲಿಸಿದರು. "ನಿಮ್ಮ ಈ ಮನವಿಯನ್ನು ಜೈಲು ಅಧಿಕಾರಿಗಳಿಗೆ ನೀಡಿ. ಅವರು ಅವಕಾಶ ನೀಡದೇ ಇದ್ದಲ್ಲಿ ವಿಚಾರಣೆ ನಡೆಸೋಣ" ಎಂದು ಸೂಚಿಸಿದರು.</p><p>ಪ್ರಜ್ವಲ್ ಅವರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>