‘ಇದಕ್ಕಾಗಿ ನಾಲ್ಕು ಅಂಕಿಗಳ ಟೋಲ್ ಫ್ರೀ ನಂಬರ್ ನೀಡಲಾಗುವುದು. ಅದಕ್ಕೊಂದು ನಿಯಂತ್ರಣ ಕೊಠಡಿ ರಚಿಸಲಾಗುವುದು. ಫಲಾನುಭವಿಗಳು ಅದಕ್ಕೆ ಕರೆ ಮಾಡಿ ತಮ್ಮ ಹೆಸರು, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ನಂಬರ್ ತಿಳಿಸಿದರೆ ಸಾಕು. 10 ನಿಮಿಷದಲ್ಲಿ ತಹಶೀಲ್ದಾರ್ ಹಾಗೂ ಗ್ರಾಮಲೆಕ್ಕಿಗರಿಗೆ ಏಕಕಾಲದಲ್ಲಿ ಮಾಹಿತಿ ರವಾನೆ ಆಗುತ್ತದೆ. ಅದಾಗಿ 72 ಗಂಟೆಗಳ ಒಳಗೆ ಕಂದಾಯ ಸಿಬ್ಬಂದಿ ಫಲಾನುಭವಿಗಳ ಮನೆಗೆ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲನೆ ಮಾಡಿ ಪ್ರಮಾಣ ಪತ್ರ ವಿತರಿಸುತ್ತಾರೆ. ಬಳಿಕ ಅವರಿಗೆ ಪಿಂಚಣಿ ವಿತರಣೆ ಮಾಡಲಾಗುವುದು. ಜನರಿದ್ದಲ್ಲೇ ಸರ್ಕಾರ, ಜನರದ್ದೇ ಸರ್ಕಾರ ಎಂಬ ಪರಿಕಲ್ಪನೆಯಲ್ಲಿ ಕೆಲಸ ಮಾಡಲಾಗುತ್ತಿದೆ' ಎಂದರು.