ವರದಿ ತಯಾರಿಕೆಯ ಉಸ್ತುವಾರಿ ನಿರ್ವಹಿಸುತ್ತಿರುವ ಆಯಾ ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗಕ್ಕೆ, ಮಂಡಳಿಯ ಸದಸ್ಯ ಕಾರ್ಯದರ್ಶಿ ಕೆಲ ದಿನಗಳ ಹಿಂದೆ ಈ ಸಂಬಂಧ ಪತ್ರವೊಂದನ್ನು ಕಳುಹಿಸಿದ್ದಾರೆ. ‘ವರದಿ ತಯಾರಿಕೆ ಸಂಬಂಧ ಹಲವಾರು ಬಾರಿ ಮಾಹಿತಿ ನೀಡಿದ್ದರೂ, ದಾಖಲಾತಿಯಲ್ಲಿ ತಿದ್ದುಪಡಿಗಳು ಕಂಡುಬಂದಿವೆ. ಇದನ್ನು ಸರಿಪಡಿಸಿ, ಪುನಃ ವರದಿ ಸಲ್ಲಿಸಬೇಕು’ ಎಂದು ಪತ್ರದಲ್ಲಿ ಸೂಚಿಸಲಾಗಿದೆ.