* ಸಮಾವೇಶಕ್ಕೆ ಹರಿದು ಬಂದ ಜನಸಾಗರ * ಒಂದು ಲಕ್ಷ ಹಕ್ಕು ಪತ್ರ ಹಂಚಿಕೆ * ಸಂತಸ ಹಂಚಿಕೊಂಡ ಫಲಾನುಭವಿಗಳು
ಹಾವೇರಿಯಲ್ಲಿ ಶನಿವಾರ ಆಯೋಜಿಸಿದ್ದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದರು. ಸಚಿವರಾದ ಶಿವಾನಂದ ಪಾಟೀಲ ಕೆ.ಎಚ್.ಮುನಿಯಪ್ಪ ಜಿ.ಪರಮೇಶ್ವರ ಎಚ್.ಕೆ.ಪಾಟೀಲ ಮತ್ತಿತರರು ಇದ್ದರು.
ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಈಗಾಗಲೇ 2.20 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ಸಿಕ್ಕಿದೆ. ಮುಂಬರುವ ದಿನಗಳಲ್ಲಿ ಬಾಕಿ ಕುಟುಂಬಗಳಿಗೂ ಹಕ್ಕುಪತ್ರ ನೀಡಲಾಗುವುದು.
ಸಿದ್ದರಾಮಯ್ಯ ಮುಖ್ಯಮಂತ್ರಿ
ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡುತ್ತಾರೆ. ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ. ರಾಮ ಆಂಜನೇಯ ಹಾಗೂ ಇತರೆ ದೇವರು ಕೇವಲ ಬಿಜೆಪಿಯ ಆಸ್ತಿಯಲ್ಲ. ದೇಶದ ಎಲ್ಲ ವರ್ಗದವರ ಆಸ್ತಿ.