ಕೆಎಸ್ಆರ್ಟಿಸಿಯು ಚುನಾವಣೆ ಕರ್ತವ್ಯಕ್ಕೆ 3700 ಬಸ್ಗಳನ್ನು ನಿಯೋಜಿಸಿದೆ. ಇದರಿಂದ ಬೆಂಗಳೂರಿನಿಂದ ಬೇರೆ ಬೇರೆ ಜಿಲ್ಲೆಗಳಿಗೆ ತೆರಳುವ ಬಸ್ಗಳ ಸಂಖ್ಯೆ ಕಡಿಮೆಯಾಗಿದೆ.
ಬಳ್ಳಾರಿ, ಸಿರಗುಪ್ಪ, ಸಿಂಧನೂರು, ದೇವದುರ್ಗ, ಸುರಪುರ, ಶಹಾಪುರ, ಲಿಂಗಸೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಕಡೆಗೆ ಬಸ್ಗಳಿಲ್ಲದೇ ಪ್ರಯಾಣಿಕರು ಬಸ್ ನಿಲ್ದಾಣದಲ್ಲೇ ಕಾದು ಕುಳಿತಿದ್ದಾರೆ. ಕೆಲವು ಪ್ರಯಾಣಿಕರು ಊರಿಗೆ ತೆರಳು ಸಾಧ್ಯವಾಗದೇ ಮನೆಗೆ ವಾಪಸ್ ತೆರಳಿದರು. ರಾಜ್ಯದ ಬೇರೆ ಬೇರೆ ಭಾಗಕ್ಕೆ 200 ಬಿಎಂಟಿಸ್ ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೂ ಪ್ರಯಾಣಕರ ಸಂಖ್ಯೆ ಕಡಿಮೆಯಾಗುತ್ತಿಲ್ಲ ಎಂದು ಸಿಬ್ಬಂದಿ ತಿಳಿಸಿದರು.