ಸ್ಪಿನ್ ಸಲೂನ್ಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಡಿಸಿಪಿ ಶಶಿಕುಮಾರ್, ‘ಇಂದಿನಿಂದ ಕೆಲಸ ಮಾಡಲು ಸಲೂನ್ಗಳಿಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೆಲವು ಸಲೂನ್ಗಳಿಗೆ ಆಕಸ್ಮಿಕವಾಗಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ. ಈ ಸಲೂನ್ನಲ್ಲಿ ಆರೋಗ್ಯ, ಸ್ವಚ್ಛತೆ ಕಾಪಾಡಲು ಹೆಚ್ಚಿನ ಒತ್ತು ನೀಡಲಾಗಿದೆ. ಟವಲ್ ಬಳಸುವ ಬದಲು ವಿಲೇವಾರಿ ವಸ್ತುವನ್ನು ಬಳಸುತ್ತಿದ್ದಾರೆ. ಎಲ್ಲರೂ ಇದೇ ಮಾದರಿ ಅನುಸರಿಸಬೇಕು‘ ಎಂದರು.