ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಪಿಸುತ್ತಿರುವ ಭಯೋತ್ಪಾದನೆ, ಸರ್ಕಾರದ ನಿರ್ಲಕ್ಷ್ಯ: ಮಾಳವಿಕಾ ಅವಿನಾಶ್‌

Published 28 ಮಾರ್ಚ್ 2024, 16:19 IST
Last Updated 28 ಮಾರ್ಚ್ 2024, 16:19 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ವ್ಯಾಪಿಸುತ್ತಿದ್ದರೂ ರಾಜ್ಯ ಸರ್ಕಾರ ಮಾತ್ರ ಏನೂ ನಡೆಯುತ್ತಿಲ್ಲ ಎಂದು ನಿರ್ಲಕ್ಷ್ಯ ಭಾವನೆಯಲ್ಲಿದೆ. ಕರ್ನಾಟಕ ಅತ್ಯಂತ ದುರ್ದೈವ ಪರಿಸ್ಥಿತಿಯಲ್ಲಿದೆ’ ಎಂದು ಬಿಜೆಪಿ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್‌ ಹೇಳಿದರು.

‘ಎನ್‌ಐಎ ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ದಾಳಿ ನಡೆಸಿ ಮಹತ್ವದ ಮಾಹಿತಿಗಳನ್ನು ಕಲೆ ಹಾಕಿದೆ. ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳ ಕುರಿತು ಮಾಹಿತಿ ಲಭಿಸಿದೆ. ಇಲ್ಲಿನ ಸ್ಫೋಟಕ್ಕೂ ಮಂಗಳೂರಿನ ಸ್ಫೋಟಕ್ಕೂ ಸಂಬಂಧ ಇದೆ ಎಂದು ಹೇಳಿದರೂ ಮುಖ್ಯಮಂತ್ರಿಯವರು ಅಲ್ಲಗಳೆಯುತ್ತಿದ್ದಾರೆ’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

‘ರಾಮೇಶ್ವರಂ ಕೆಫೆಯಲ್ಲಿ ಸ್ಫೋಟದ ದಿನ ಸರ್ಕಾರದ ಎಲ್ಲ ಪ್ರತಿನಿಧಿಗಳು ಇದು ಭಯೋತ್ಪಾದಕ ಚಟುವಟಿಕೆ ಅಲ್ಲ. ಎರಡು ಉದ್ಯಮಗಳ ನಡುವಿನ ವ್ಯಾಜ್ಯ ಎಂದು ಬಿಂಬಿಸಿದ್ದರು. ಭಯೋತ್ಪಾದನೆ ನಿಗ್ರಹಕ್ಕೆ ಪ್ರಯತ್ನ ಮಾಡದೇ ಸರ್ಕಾರವು ಜನರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿದೆ’ ಎಂದು ಅವರು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT