<p><strong>ಬೆಂಗಳೂರು: </strong>ನಗರದ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ್ದ ಕಿರು ಉಪಗ್ರಹವನ್ನು (ಆರ್ಎಸ್ಎಟಿ) ಆಂಧ್ರಪ್ರದೇಶದಲ್ಲಿನ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ಎಚ್ಎಆರ್) ಭಾನುವಾರ ಮಧ್ಯಾಹ್ನ 1ಕ್ಕೆ ಯಶಸ್ವಿಯಾಗಿ ಉಡಾಯಿಸಲಾಯಿತು.</p>.<p>ಈ ಉಪಗ್ರಹಕ್ಕೆ ‘ಸಿಂಧುನೇತ್ರ’ ಎಂದು ಹೆಸರಿಡಲಾಗಿದ್ದು, ಪ್ರಾಥಮಿಕ ಹಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಪಿಇಎಸ್ ತಂಡದಲ್ಲಿನ ವಿಜ್ಞಾನಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹೈದರಾಬಾದ್ನಲ್ಲಿರುವ ಇಸ್ರೊದ ನಿಯಂತ್ರಣ ಕೇಂದ್ರವು ಈ ಉಪಗ್ರಹ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದು, ಮಧ್ಯಾಹ್ನ 2 ಗಂಟೆಯ ವೇಳೆಗೆ ಆರ್ಎಸ್ಎಟಿಯಿಂದ ಸಂದೇಶಗಳು ಬಂದಿವೆ. ಉಪಗ್ರಹವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬ್ಯಾಟರಿ ಸಾಮರ್ಥ್ಯ ಉತ್ತಮವಾಗಿದೆ’ ಎಂದು ಅವರು ಹೇಳಿದರು.</p>.<p>‘ಉಪಗ್ರಹವು ನಿಗದಿತ ಕಕ್ಷೆ ಸೇರಿದ್ದರ ಬಗ್ಗೆ ಮಂಗಳವಾರ (ಮಾ.1) ಮಾಹಿತಿ ಗೊತ್ತಾಗುತ್ತದೆ. ಸಂಪೂರ್ಣ ಕಾರ್ಯಾಚರಣೆಯನ್ನೂ ಮಂಗಳವಾರದಿಂದಲೇ ಪ್ರಾರಂಭಿಸಲಿದೆ’ ಎಂದು ಅವರು ಹೇಳಿದರು.</p>.<p>ಪಿಇಎಸ್ನ ಡಾ. ಸಾಂಬಶಿವ ರಾವ್ ಮತ್ತು ಡಾ. ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ನೆರವಿನಿಂದ ಈ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದ್ದಾರೆ. ಡಿಆರ್ಡಿಒ ಈ ಕಾರ್ಯಕ್ಕೆ ₹2.2 ಕೋಟಿ ಧನಸಹಾಯ ನೀಡಿದೆ.</p>.<p>ವಿದ್ಯಾರ್ಥಿಗಳಾದ ಎಂ. ಯೋಗೇಶ್, ಪರ್ವೇಜ್ ಮಹಮ್ಮದ್, ಕಾವ್ಯಶ್ರೀ, ಅಜಿತ್ ಕುಮಾರ್, ಮಹಾಂತೇಶ್, ಅಬ್ದುಲ್, ಅಭಿರಾಮಿ ಉಪಗ್ರಹ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ.</p>.<p>‘ಸಿಂಧುನೇತ್ರ’ ಉಡಾವಣೆಯು ಯಶಸ್ವಿಯಾಗಿದ್ದು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ಆರ್. ದೊರೆಸ್ವಾಮಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ವಿಜ್ಞಾನ ದಿನದಂದೇ ಕಾಲೇಜಿನ ಈ ತಂಡ ಇಂತಹ ವಿಶಿಷ್ಟ ಸಾಧನೆ ಮಾಡಿರುವುದು ಅಭಿನಂದನಾರ್ಹ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಪಿಇಎಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ್ದ ಕಿರು ಉಪಗ್ರಹವನ್ನು (ಆರ್ಎಸ್ಎಟಿ) ಆಂಧ್ರಪ್ರದೇಶದಲ್ಲಿನ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (ಎಸ್ಎಚ್ಎಆರ್) ಭಾನುವಾರ ಮಧ್ಯಾಹ್ನ 1ಕ್ಕೆ ಯಶಸ್ವಿಯಾಗಿ ಉಡಾಯಿಸಲಾಯಿತು.</p>.<p>ಈ ಉಪಗ್ರಹಕ್ಕೆ ‘ಸಿಂಧುನೇತ್ರ’ ಎಂದು ಹೆಸರಿಡಲಾಗಿದ್ದು, ಪ್ರಾಥಮಿಕ ಹಂತದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಪಿಇಎಸ್ ತಂಡದಲ್ಲಿನ ವಿಜ್ಞಾನಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಹೈದರಾಬಾದ್ನಲ್ಲಿರುವ ಇಸ್ರೊದ ನಿಯಂತ್ರಣ ಕೇಂದ್ರವು ಈ ಉಪಗ್ರಹ ಕಾರ್ಯಾಚರಣೆಯ ಮೇಲೆ ನಿಗಾ ಇಟ್ಟಿದ್ದು, ಮಧ್ಯಾಹ್ನ 2 ಗಂಟೆಯ ವೇಳೆಗೆ ಆರ್ಎಸ್ಎಟಿಯಿಂದ ಸಂದೇಶಗಳು ಬಂದಿವೆ. ಉಪಗ್ರಹವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಬ್ಯಾಟರಿ ಸಾಮರ್ಥ್ಯ ಉತ್ತಮವಾಗಿದೆ’ ಎಂದು ಅವರು ಹೇಳಿದರು.</p>.<p>‘ಉಪಗ್ರಹವು ನಿಗದಿತ ಕಕ್ಷೆ ಸೇರಿದ್ದರ ಬಗ್ಗೆ ಮಂಗಳವಾರ (ಮಾ.1) ಮಾಹಿತಿ ಗೊತ್ತಾಗುತ್ತದೆ. ಸಂಪೂರ್ಣ ಕಾರ್ಯಾಚರಣೆಯನ್ನೂ ಮಂಗಳವಾರದಿಂದಲೇ ಪ್ರಾರಂಭಿಸಲಿದೆ’ ಎಂದು ಅವರು ಹೇಳಿದರು.</p>.<p>ಪಿಇಎಸ್ನ ಡಾ. ಸಾಂಬಶಿವ ರಾವ್ ಮತ್ತು ಡಾ. ನಾಗೇಂದ್ರ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ನೆರವಿನಿಂದ ಈ ಉಪಗ್ರಹವನ್ನು ಅಭಿವೃದ್ಧಿ ಪಡಿಸಿದ್ದಾರೆ. ಡಿಆರ್ಡಿಒ ಈ ಕಾರ್ಯಕ್ಕೆ ₹2.2 ಕೋಟಿ ಧನಸಹಾಯ ನೀಡಿದೆ.</p>.<p>ವಿದ್ಯಾರ್ಥಿಗಳಾದ ಎಂ. ಯೋಗೇಶ್, ಪರ್ವೇಜ್ ಮಹಮ್ಮದ್, ಕಾವ್ಯಶ್ರೀ, ಅಜಿತ್ ಕುಮಾರ್, ಮಹಾಂತೇಶ್, ಅಬ್ದುಲ್, ಅಭಿರಾಮಿ ಉಪಗ್ರಹ ಅಭಿವೃದ್ಧಿಗೆ ಕೈಜೋಡಿಸಿದ್ದಾರೆ.</p>.<p>‘ಸಿಂಧುನೇತ್ರ’ ಉಡಾವಣೆಯು ಯಶಸ್ವಿಯಾಗಿದ್ದು, ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ.ಆರ್. ದೊರೆಸ್ವಾಮಿ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ವಿಜ್ಞಾನ ದಿನದಂದೇ ಕಾಲೇಜಿನ ಈ ತಂಡ ಇಂತಹ ವಿಶಿಷ್ಟ ಸಾಧನೆ ಮಾಡಿರುವುದು ಅಭಿನಂದನಾರ್ಹ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>