ರಿಟ್ ಅರ್ಜಿಯಲ್ಲೇನಿದೆ?: ‘ಶಿವಮೂರ್ತಿ ಶರಣರ ವಿರುದ್ಧ ಪ್ರಕರಣ ದಾಖಲಿಸಲು ಬಾಲಕಿಯರಿಗೆ ಪ್ರಚೋದನೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಸವ ರಾಜನ್ ಮತ್ತಿತರ ಆರೋಪಿಗಳ ವಿರುದ್ಧ ವಂಚನೆ, ಬೆದರಿಕೆಯ ದೂರು ದಾಖಲಿಸ
ಲಾಗಿದೆ. ಆದರೆ, ಪೊಲೀಸರು ಈ ಪ್ರಕರಣದ ತನಿಖೆಯನ್ನು ಸಮರ್ಪಕ ವಾಗಿ ನಡೆಸುತ್ತಿಲ್ಲ. ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯಿಂದ ಬೇರೆಡೆಗೆ ವರ್ಗಾಯಿಸಲು, ತನಿಖೆಗೆ ಮಹಿಳಾ ಪೊಲೀಸ್ ಅಧಿಕಾರಿಯನ್ನು ನೇಮಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಬಸವಪ್ರಭು ಕೋರಿದ್ದಾರೆ.