<p><strong>ಬೆಂಗಳೂರು:</strong> ಪೆಟ್ರೋಲ್ ಬೆಲೆ ಪ್ರಸ್ತಾಪದ ವಿರುದ್ಧ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ. ಪೆಟ್ರೋಲ್ ದರ ಮತ್ತೆ ಏರಿಕೆ ಮಾಡಲು ಹೊರಟಿದ್ದೀರಲ್ಲ ಸ್ವಾಮಿ, ನಿಮ್ಮ ಸರ್ಕಾರದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು? ಎಂದು ಪ್ರಶ್ನಿಸಿದ್ದಾರೆ.</p>.<p>ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿ. ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ!</p>.<h2>ಜೂನ್ 2024</h2>.<p><strong>ಪೆಟ್ರೋಲ್ -</strong> ₹3 ಏರಿಕೆ</p><p><strong>ಡೀಸೆಲ್ -</strong> ₹3.5 ಏರಿಕೆ</p>.<h2>ಏಪ್ರಿಲ್ 2025</h2>.<p><strong>ಡೀಸೆಲ್</strong> - ₹2 ಏರಿಕೆ</p>.<h2>ನವೆಂಬರ್ 2025</h2>.<p><strong>ಪೆಟ್ರೋಲ್</strong> - ₹1 ಏರಿಕೆ?</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಸರ್ಕಾರ ಬಂದಾಗಿನಿಂದ ಕಳೆದ 2.5 ವರ್ಷಗಳಲ್ಲಿ ಈಗಾಗಲೇ ಡೀಸೆಲ್ ಬೆಲೆ ₹5.5 ಹಾಗೂ ಪೆಟ್ರೋಲ್ ಬೆಲೆ ₹3 ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ.</p>.<p>ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ₹1 ಹೆಚ್ಚಳ ಮಾಡಲು ಹೊರಟಿದ್ದೀರಲ್ಲ, ನಿಮ್ಮ ಸರ್ಕಾದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು. ಈ ಜನವಿರೋಧಿ ಸರ್ಕಾರದಿಂದ ಕರ್ನಾಟಕದ ಜನತೆ ಬೇಸತ್ತು ಹೋಗಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೆಟ್ರೋಲ್ ಬೆಲೆ ಪ್ರಸ್ತಾಪದ ವಿರುದ್ಧ ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ ಕಿಡಿಕಾರಿದ್ದಾರೆ. ಪೆಟ್ರೋಲ್ ದರ ಮತ್ತೆ ಏರಿಕೆ ಮಾಡಲು ಹೊರಟಿದ್ದೀರಲ್ಲ ಸ್ವಾಮಿ, ನಿಮ್ಮ ಸರ್ಕಾರದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು? ಎಂದು ಪ್ರಶ್ನಿಸಿದ್ದಾರೆ.</p>.<p>ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಪೆಟ್ರೋಲ್ ಬೆಲೆ ಮತ್ತಷ್ಟು ದುಬಾರಿ. ಕಾಂಗ್ರೆಸ್ ಸರ್ಕಾರದಿಂದ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ!</p>.<h2>ಜೂನ್ 2024</h2>.<p><strong>ಪೆಟ್ರೋಲ್ -</strong> ₹3 ಏರಿಕೆ</p><p><strong>ಡೀಸೆಲ್ -</strong> ₹3.5 ಏರಿಕೆ</p>.<h2>ಏಪ್ರಿಲ್ 2025</h2>.<p><strong>ಡೀಸೆಲ್</strong> - ₹2 ಏರಿಕೆ</p>.<h2>ನವೆಂಬರ್ 2025</h2>.<p><strong>ಪೆಟ್ರೋಲ್</strong> - ₹1 ಏರಿಕೆ?</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಸರ್ಕಾರ ಬಂದಾಗಿನಿಂದ ಕಳೆದ 2.5 ವರ್ಷಗಳಲ್ಲಿ ಈಗಾಗಲೇ ಡೀಸೆಲ್ ಬೆಲೆ ₹5.5 ಹಾಗೂ ಪೆಟ್ರೋಲ್ ಬೆಲೆ ₹3 ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ.</p>.<p>ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ₹1 ಹೆಚ್ಚಳ ಮಾಡಲು ಹೊರಟಿದ್ದೀರಲ್ಲ, ನಿಮ್ಮ ಸರ್ಕಾದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆರಬೇಕು. ಈ ಜನವಿರೋಧಿ ಸರ್ಕಾರದಿಂದ ಕರ್ನಾಟಕದ ಜನತೆ ಬೇಸತ್ತು ಹೋಗಿದ್ದಾರೆ. ಇನ್ನೆಷ್ಟು ದಿನ ಸ್ವಾಮಿ ಈ ಭಂಡ ಬಾಳು? ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಕಿಡಿಕಾರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>