<p><strong>ಬೆಂಗಳೂರು</strong>: ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡ ನೇತೃತ್ವದ ಶುಲ್ಕ ನಿಯಂತ್ರಣ ಸಮಿತಿ ಎಚ್ಚರಿಕೆ ನೀಡಿದ ನಂತರ ವಿವಿಧ ಕಾಲೇಜುಗಳು ಹೆಚ್ಚುವರಿಯಾಗಿ ಪಡೆದಿದ್ದ 25 ವಿದ್ಯಾರ್ಥಿಗಳ ಶುಲ್ಕವನ್ನು ಹಿಂದಿರುಗಿಸಿವೆ.</p>.<p>ಎಂ.ಬಿ.ಎ, ಎಂ.ಸಿ.ಎ ಮತ್ತು ನರ್ಸಿಂಗ್ ಕೋರ್ಸ್ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟು ಹಂಚಿಕೆ ಮಾಡಿತ್ತು. ನಿಗದಿಗಿಂತ ಹೆಚ್ಚುವರಿಯಾಗಿ ₹55 ಸಾವಿರದಿಂದ ₹4 ಲಕ್ಷ ದವರೆಗೆ ಶುಲ್ಕ ವಸೂಲಿಗೆ ಬೇಡಿಕೆ ಇಟ್ಟಿವೆ ಎಂದು ವಿದ್ಯಾರ್ಥಿಗಳು ಸಮಿತಿಗೆ ದೂರು ಸಲ್ಲಿಸಿದ್ದರು. ದೂರು ಬಂದಿದ್ದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿದ ಸಮಿತಿ, ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿತ್ತು. </p>.<p>ಸಮಿತಿಯ ಸೂಚನೆ ನಂತರವೂ ವಿದ್ಯಾರ್ಥಿಗಳಿಗೆ ಎಂ.ಬಿ.ಎ ಕೋರ್ಸ್ ಪ್ರವೇಶಕ್ಕೆ ಹೆಚ್ಚುವರಿ ಶುಲ್ಕದ ಬೇಡಿಕೆ ಇಟ್ಟಿರುವ ಮಾಗಡಿ ರಸ್ತೆಯ ಆಚಾರ್ಯ ಬೆಂಗಳೂರು ಬ್ಯುಸಿನೆಸ್ ಸ್ಕೂಲ್ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ನ್ಯಾ.ಶ್ರೀನಿವಾಸಗೌಡ ಹೇಳಿದ್ದಾರೆ.</p>.<p>ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ತುಮಕೂರು ಮತ್ತು ದಾವಣಗೆರೆ ವಿಶ್ವವಿದ್ಯಾಲಯಗಳು ಕೂಡ ಹೆಚ್ಚುವರಿ ಶುಲ್ಕ ವಸೂಲಿಯ ಬೇಡಿಕೆ ಇಟ್ಟಿದ್ದವು. ಎಚ್ಚರಿಕೆಯ ನಂತರ ಶುಲ್ಕ ಮರಳಿಸಿವೆ. </p>.<p><strong>₹2.12 ಲಕ್ಷ ವಾಪಸ್</strong>: ಸಿಇಟಿ ಮೂಲಕ ಸೀಟು ಹಂಚಿಕೆಯಾದ ನಂತರ ಕಾಮೆಡ್- ಕೆ ಸೀಟಿಗೆ ಪಾವತಿಸಿದ್ದ ಶುಲ್ಕ ಹಿಂದಿರುಗಿಸಲು ನಿರಾಕರಿಸಿದ್ದ ಡಾ.ಅಂಬೇಡ್ಕರ್ ಎಂಜಿನಿಯರಿಂಗ್ ಕಾಲೇಜಿನಿಂದ ವಿದ್ಯಾರ್ಥಿನಿಯೊಬ್ಬರಿಗೆ ₹2.12 ಲಕ್ಷ ರೂಪಾಯಿ ಶುಲ್ಕ ಹಿಂದಿರುಗಿಸಿದೆ. ಟಿ. ಜಾನ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ-ಫಾರ್ಮಾ ಕೋರ್ಸ್ಗೆ ಪ್ರವೇಶ ಪಡೆದಿದ್ದ ವಿದ್ಯಾರ್ಥಿಯಿಂದ ಸಂಗ್ರಹಿಸಿದ್ದ ₹50 ಸಾವಿರ ಶುಲ್ಕವನ್ನು ನಿಯಂತ್ರಣ ಸಮಿತಿ ವಾಪಸ್ ಕೊಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನ್ಯಾಯಮೂರ್ತಿ ಬಿ. ಶ್ರೀನಿವಾಸ ಗೌಡ ನೇತೃತ್ವದ ಶುಲ್ಕ ನಿಯಂತ್ರಣ ಸಮಿತಿ ಎಚ್ಚರಿಕೆ ನೀಡಿದ ನಂತರ ವಿವಿಧ ಕಾಲೇಜುಗಳು ಹೆಚ್ಚುವರಿಯಾಗಿ ಪಡೆದಿದ್ದ 25 ವಿದ್ಯಾರ್ಥಿಗಳ ಶುಲ್ಕವನ್ನು ಹಿಂದಿರುಗಿಸಿವೆ.</p>.<p>ಎಂ.ಬಿ.ಎ, ಎಂ.ಸಿ.ಎ ಮತ್ತು ನರ್ಸಿಂಗ್ ಕೋರ್ಸ್ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟು ಹಂಚಿಕೆ ಮಾಡಿತ್ತು. ನಿಗದಿಗಿಂತ ಹೆಚ್ಚುವರಿಯಾಗಿ ₹55 ಸಾವಿರದಿಂದ ₹4 ಲಕ್ಷ ದವರೆಗೆ ಶುಲ್ಕ ವಸೂಲಿಗೆ ಬೇಡಿಕೆ ಇಟ್ಟಿವೆ ಎಂದು ವಿದ್ಯಾರ್ಥಿಗಳು ಸಮಿತಿಗೆ ದೂರು ಸಲ್ಲಿಸಿದ್ದರು. ದೂರು ಬಂದಿದ್ದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಜತೆ ಮಾತುಕತೆ ನಡೆಸಿದ ಸಮಿತಿ, ಕಾನೂನು ಕ್ರಮ ಜರುಗಿಸುವ ಎಚ್ಚರಿಕೆ ನೀಡಿತ್ತು. </p>.<p>ಸಮಿತಿಯ ಸೂಚನೆ ನಂತರವೂ ವಿದ್ಯಾರ್ಥಿಗಳಿಗೆ ಎಂ.ಬಿ.ಎ ಕೋರ್ಸ್ ಪ್ರವೇಶಕ್ಕೆ ಹೆಚ್ಚುವರಿ ಶುಲ್ಕದ ಬೇಡಿಕೆ ಇಟ್ಟಿರುವ ಮಾಗಡಿ ರಸ್ತೆಯ ಆಚಾರ್ಯ ಬೆಂಗಳೂರು ಬ್ಯುಸಿನೆಸ್ ಸ್ಕೂಲ್ಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ನ್ಯಾ.ಶ್ರೀನಿವಾಸಗೌಡ ಹೇಳಿದ್ದಾರೆ.</p>.<p>ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ತುಮಕೂರು ಮತ್ತು ದಾವಣಗೆರೆ ವಿಶ್ವವಿದ್ಯಾಲಯಗಳು ಕೂಡ ಹೆಚ್ಚುವರಿ ಶುಲ್ಕ ವಸೂಲಿಯ ಬೇಡಿಕೆ ಇಟ್ಟಿದ್ದವು. ಎಚ್ಚರಿಕೆಯ ನಂತರ ಶುಲ್ಕ ಮರಳಿಸಿವೆ. </p>.<p><strong>₹2.12 ಲಕ್ಷ ವಾಪಸ್</strong>: ಸಿಇಟಿ ಮೂಲಕ ಸೀಟು ಹಂಚಿಕೆಯಾದ ನಂತರ ಕಾಮೆಡ್- ಕೆ ಸೀಟಿಗೆ ಪಾವತಿಸಿದ್ದ ಶುಲ್ಕ ಹಿಂದಿರುಗಿಸಲು ನಿರಾಕರಿಸಿದ್ದ ಡಾ.ಅಂಬೇಡ್ಕರ್ ಎಂಜಿನಿಯರಿಂಗ್ ಕಾಲೇಜಿನಿಂದ ವಿದ್ಯಾರ್ಥಿನಿಯೊಬ್ಬರಿಗೆ ₹2.12 ಲಕ್ಷ ರೂಪಾಯಿ ಶುಲ್ಕ ಹಿಂದಿರುಗಿಸಿದೆ. ಟಿ. ಜಾನ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ-ಫಾರ್ಮಾ ಕೋರ್ಸ್ಗೆ ಪ್ರವೇಶ ಪಡೆದಿದ್ದ ವಿದ್ಯಾರ್ಥಿಯಿಂದ ಸಂಗ್ರಹಿಸಿದ್ದ ₹50 ಸಾವಿರ ಶುಲ್ಕವನ್ನು ನಿಯಂತ್ರಣ ಸಮಿತಿ ವಾಪಸ್ ಕೊಡಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>