<p><strong>ಬೆಂಗಳೂರು</strong>: ಐದು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರ ಮತ್ತು ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ಛಾಯಾಗ್ರಾಹಕರಾಗಿದ್ದ ಖ್ಯಾತ ಛಾಯಾಗ್ರಾಹಕ ಜಿ.ಎಸ್. ನಾರಾಯಣಸ್ವಾಮಿ (85) ಸೋಮವಾರ ನಿಧನರಾಗಿದ್ದಾರೆ.</p>.<p>ಕೋಣನಕುಂಟೆಯ ಕೋಕನಟ್ ಬಡಾವಣೆಯಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಅವರು ವಿಶ್ರಾಂತ ಜೀವನ ನಡೆಸುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ವರನಟ ಡಾ.ರಾಜ್ಕುಮಾರ್ ಅವರ ಆಪ್ತರಾಗಿದ್ದವರಲ್ಲಿ ನಾರಾಯಣಸ್ವಾಮಿ ಕೂಡ ಒಬ್ಬರೆನಿಸಿಕೊಂಡಿದ್ದರು.</p>.<p>ಸೌಂಡ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮೊ ಶಿಕ್ಷಣ ಪಡೆದಿದ್ದ ಅವರು 1960ರಲ್ಲಿ ‘ತಾಯಿನಾಡು’ ಪತ್ರಿಕೆಯಲ್ಲಿ ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದರು. ‘ಸುಧಾ’ ವಾರಪತ್ರಿಕೆ ಸೇರಿದಂತೆ ಹಲವು ವಾರಪತ್ರಿಕೆಗಳು ಮತ್ತು ದಿನ ಪತ್ರಿಕೆಗಳಲ್ಲಿ ಸುದ್ದಿ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು.</p>.<p>ಸುದ್ದಿ ಚಿತ್ರ, ನುಡಿಚಿತ್ರ, ಕ್ರೀಡೆ ಹಾಗೂ ಸಿನಿಮಾ ಕ್ಷೇತ್ರಗಳಿಗೆ ಸಂಬಂಧಿಸಿ ಅವರು ತೆಗೆದ ಛಾಯಾಚಿತ್ರಗಳು ಓದುಗರ ಗಮನ ಸೆಳೆದಿದ್ದವು. ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಿನಿ ಪ್ರಶಸ್ತಿ ಸೇರಿದಂತೆ ಹಲವು ಸಂಘಸಂಸ್ಥೆಗಳ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐದು ದಶಕಗಳಿಗೂ ಹೆಚ್ಚು ಕಾಲ ರಾಷ್ಟ್ರ ಮತ್ತು ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ ಛಾಯಾಗ್ರಾಹಕರಾಗಿದ್ದ ಖ್ಯಾತ ಛಾಯಾಗ್ರಾಹಕ ಜಿ.ಎಸ್. ನಾರಾಯಣಸ್ವಾಮಿ (85) ಸೋಮವಾರ ನಿಧನರಾಗಿದ್ದಾರೆ.</p>.<p>ಕೋಣನಕುಂಟೆಯ ಕೋಕನಟ್ ಬಡಾವಣೆಯಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಅವರು ವಿಶ್ರಾಂತ ಜೀವನ ನಡೆಸುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ವರನಟ ಡಾ.ರಾಜ್ಕುಮಾರ್ ಅವರ ಆಪ್ತರಾಗಿದ್ದವರಲ್ಲಿ ನಾರಾಯಣಸ್ವಾಮಿ ಕೂಡ ಒಬ್ಬರೆನಿಸಿಕೊಂಡಿದ್ದರು.</p>.<p>ಸೌಂಡ್ ಎಂಜಿನಿಯರಿಂಗ್ನಲ್ಲಿ ಡಿಪ್ಲೊಮೊ ಶಿಕ್ಷಣ ಪಡೆದಿದ್ದ ಅವರು 1960ರಲ್ಲಿ ‘ತಾಯಿನಾಡು’ ಪತ್ರಿಕೆಯಲ್ಲಿ ಛಾಯಾಗ್ರಾಹಕನಾಗಿ ವೃತ್ತಿ ಆರಂಭಿಸಿದ್ದರು. ‘ಸುಧಾ’ ವಾರಪತ್ರಿಕೆ ಸೇರಿದಂತೆ ಹಲವು ವಾರಪತ್ರಿಕೆಗಳು ಮತ್ತು ದಿನ ಪತ್ರಿಕೆಗಳಲ್ಲಿ ಸುದ್ದಿ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದರು.</p>.<p>ಸುದ್ದಿ ಚಿತ್ರ, ನುಡಿಚಿತ್ರ, ಕ್ರೀಡೆ ಹಾಗೂ ಸಿನಿಮಾ ಕ್ಷೇತ್ರಗಳಿಗೆ ಸಂಬಂಧಿಸಿ ಅವರು ತೆಗೆದ ಛಾಯಾಚಿತ್ರಗಳು ಓದುಗರ ಗಮನ ಸೆಳೆದಿದ್ದವು. ಕರ್ನಾಟಕ ಪತ್ರಿಕಾ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಸಿನಿ ಪ್ರಶಸ್ತಿ ಸೇರಿದಂತೆ ಹಲವು ಸಂಘಸಂಸ್ಥೆಗಳ ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>