‘ಜೀತದಾಳುಗಳ ಗುರುತಿಸುವಿಕೆ, ಅವರ ರಕ್ಷಣೆ ಹಾಗೂ ಜೀತಕ್ಕೆ ದುಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ಸೂಚಿಸಲಾದ ಮಾರ್ಗಸೂಚಿಗಳನ್ನು ರದ್ದುಪಡಿಸಬೇಕು. ಜೀತದಾಳುಗಳ ಕಲ್ಯಾಣ ಮತ್ತು ಅವರ ಆರ್ಥಿಕ ಹಿತಾಸಕ್ತಿ ಕಾಪಾಡಲು ಜಾರಿಗೆ ತಂದಿರುವ ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲು ಕೇಂದ್ರ-ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು‘ ಎಂದು ಅರ್ಜಿಯಲ್ಲಿ ಕೋರಲಾಗಿದೆ.