<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಸರ್ಕಾರವು ಕಾಸರಗೋಡು ವ್ಯಾಪ್ತಿಯಲ್ಲಿ ಕೇರಳಕ್ಕೆ ಸಂಪರ್ಕಿಸುವ ಗಡಿ ರಸ್ತೆ ಮುಚ್ಚಿರುವುದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇಲಿನ ಆದೇಶವನ್ನು ಕಾಯ್ದಿರಿಸಲಾಗಿದೆ.</p>.<p>ಈ ಕುರಿತಂತೆ ಕೇರಳ ಹೈಕೋರ್ಟ್ ವಕೀಲರ ಸಂಘ ಸಲ್ಲಿಸಿರುವ ಅರ್ಜಿಯನ್ನು ಕೇರಳ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಬುಧವಾರ ಸಂಜೆಯಿಂದ ರಾತ್ರಿಯವರೆಗೂ ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, "ರಸ್ತೆ ತಡೆ ತೆರವು ಮಾಡಿದರೆ ಸಾಕಷ್ಟು ತೊಂದರೆ ಎದುರಾಗಲಿದೆ" ಎಂದು ಪುನರುಚ್ಚರಿಸಿದರು.</p>.<p>ಇದೇ ವೇಳೆ ಪ್ರಕರಣದಲ್ಲಿ ಮಧ್ಯಂತರ ಸೇರ್ಪಡೆ ಅರ್ಜಿ ದಾಖಲಿಸಿರುವ ಬೆಂಗಳೂರು ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, "ಇದೊಂದು ಗಂಭೀರ ವಿಷಯ. ಅಂತೆಯೇ ಅಂತರರಾಜ್ಯಗಳ ಮಧ್ಯೆ ಇರುವ ವಿವಾದ. ಹಾಗಾಗಿ ಈ ಅರ್ಜಿ ವಿಚಾರಣೆ ಕೇರಳ ಹೈಕೋರ್ಟ್ ವ್ಯಾಪ್ತಿಗೆ ಒಳಪಡುವುದಿಲ್ಲ" ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಕರ್ನಾಟಕದ ಆಕ್ಷೇಪಣೆ ಸಂವಿಧಾನದ 21ನೇ ವಿಧಿಗೆ ವಿರುದ್ಧವಾಗಿದೆ" ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ ಆದೇಶ ಕಾಯ್ದಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ರಾಜ್ಯ ಸರ್ಕಾರವು ಕಾಸರಗೋಡು ವ್ಯಾಪ್ತಿಯಲ್ಲಿ ಕೇರಳಕ್ಕೆ ಸಂಪರ್ಕಿಸುವ ಗಡಿ ರಸ್ತೆ ಮುಚ್ಚಿರುವುದನ್ನು ಪ್ರಶ್ನಿಸಿ ಕೇರಳ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮೇಲಿನ ಆದೇಶವನ್ನು ಕಾಯ್ದಿರಿಸಲಾಗಿದೆ.</p>.<p>ಈ ಕುರಿತಂತೆ ಕೇರಳ ಹೈಕೋರ್ಟ್ ವಕೀಲರ ಸಂಘ ಸಲ್ಲಿಸಿರುವ ಅರ್ಜಿಯನ್ನು ಕೇರಳ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಬುಧವಾರ ಸಂಜೆಯಿಂದ ರಾತ್ರಿಯವರೆಗೂ ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಿಚಾರಣೆ ನಡೆಸಿತು.</p>.<p>ವಿಚಾರಣೆ ವೇಳೆ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ.ನಾವದಗಿ ಅವರು, "ರಸ್ತೆ ತಡೆ ತೆರವು ಮಾಡಿದರೆ ಸಾಕಷ್ಟು ತೊಂದರೆ ಎದುರಾಗಲಿದೆ" ಎಂದು ಪುನರುಚ್ಚರಿಸಿದರು.</p>.<p>ಇದೇ ವೇಳೆ ಪ್ರಕರಣದಲ್ಲಿ ಮಧ್ಯಂತರ ಸೇರ್ಪಡೆ ಅರ್ಜಿ ದಾಖಲಿಸಿರುವ ಬೆಂಗಳೂರು ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎ.ಎಸ್.ಪೊನ್ನಣ್ಣ ವಾದ ಮಂಡಿಸಿ, "ಇದೊಂದು ಗಂಭೀರ ವಿಷಯ. ಅಂತೆಯೇ ಅಂತರರಾಜ್ಯಗಳ ಮಧ್ಯೆ ಇರುವ ವಿವಾದ. ಹಾಗಾಗಿ ಈ ಅರ್ಜಿ ವಿಚಾರಣೆ ಕೇರಳ ಹೈಕೋರ್ಟ್ ವ್ಯಾಪ್ತಿಗೆ ಒಳಪಡುವುದಿಲ್ಲ" ಎಂದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಕರ್ನಾಟಕದ ಆಕ್ಷೇಪಣೆ ಸಂವಿಧಾನದ 21ನೇ ವಿಧಿಗೆ ವಿರುದ್ಧವಾಗಿದೆ" ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ ಆದೇಶ ಕಾಯ್ದಿರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>