ಶಾಸಕ ಉದಯ ಬಿ. ಗರುಡಾಚಾರ್, ‘ಪಿಂಜಾರರು ನೇಯ್ಗೆ, ಹಾಸಿಗೆ ದುರಸ್ತಿ ಕಾರ್ಯ ಮಾಡಿಕೊಂಡು ಜೀವನ ನಡೆಸುವ ಸಮುದಾಯ. ಪ್ರವರ್ಗ 1ರಲ್ಲಿ ಪರಿಗಣಿಸಲು ಇರುವ ತೊಡಕುಗಳನ್ನು ನಿವಾರಿಸಲು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು. ಮಾಜಿ ಕೇಂದ್ರ ಸಚಿವ ಕೆ.ರೆಹಮಾನ್ ಖಾನ್, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಸಂಘದ ಅಧ್ಯಕ್ಷ ಜಲೀಲ್ ಸಾಬ್, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಾದಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎನ್.ದ್ವಾರಕಾನಾಥ್, ಸಂಘದ ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಎಂ.ಡಿ ಮುನಾಫ್ ಉಪಸ್ಥಿತರಿದ್ದರು.