<p><strong>ಬೆಂಗಳೂರು:</strong> ಕೋವಿಡ್–19 ಲಾಕ್ಡೌನ್ ಏ.14 ರವರೆಗೆ ಯಾವ ರೀತಿ ನಡೆಯುತ್ತದೆ ಎಂಬುದರ ಆಧಾರದ ಮೇಲೆ ಲಾಕ್ಡೌನ್ ವಿಸ್ತರಿಸಬೇಕೊ ಬೇಡವೊ ಎಂಬ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚ್ಯವಾಗಿ ತಿಳಿಸಿದ್ದಾರೆ.</p>.<p>ವಿವಿಧ ರಾಜ್ಯಗಳಲ್ಲಿನ ಕೋವಿಡ್–19 ಪರಿಸ್ಥಿತಿಯ ಬಗ್ಗೆ ವಿಡಿಯೋ ಸಂವಾದದ ಮೂಲಕ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ, ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಸಂವಾದದಲ್ಲಿ ಭಾಗವಹಿಸಿದ್ದರು.</p>.<p>ಎಲ್ಲ ರಾಜ್ಯಗಳಲ್ಲೂ ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲಿಸಬೇಕು. ಅದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಿವಿಧ ಧರ್ಮಗುರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲಾಕ್ಡೌನ್ ಪರಿಣಾಮಕಾರಿಯಾಗಿಸಬೇಕು ಎಂದು ಮೋದಿ ಸಲಹೆ ನೀಡಿದರು.</p>.<p>ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿಯವರಿಗೆ ವಿವರಿಸಿದ ಯುಡಿಯೂರಪ್ಪ, ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿರುವುದಾಗಿಯೂ ಹೇಳಿದರು.</p>.<p>ಸಂವಾದದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಣದಲ್ಲಿಟ್ಟಿರುವ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದರು.</p>.<p>ಆಹಾರ– ಧಾನ್ಯಗಳು, ಹಣ್ಣು– ತರಕಾರಿ ಮತ್ತು ಔಷಧಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ನೋಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಎಲ್ಲೂ ವೈದ್ಯರ ಕೊರತೆ ಆಗಿಲ್ಲ. ಆಸ್ಪತ್ರೆಗಳು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರುತ್ತವೆ. ಆಯುಷ್ ವೈದ್ಯರ ನೆರವನ್ನೂ ಪಡೆಯಲಾಗುವುದು ಎಂದೂ ವಿವರಿಸಿದರು.</p>.<p>ರಾಜ್ಯದಲ್ಲಿ ಈವರೆಗೆ 124 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು, ದೇಶದಲ್ಲಿ 9 ನೇ ಸ್ಥಾನದಲ್ಲಿದೆ. ಕೋವಿಡ್–19 ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂಬುದನ್ನೂ ಅವರ ಗಮನಕ್ಕೆ ತರಲಾಯಿತು ಎಂದರು.</p>.<p>ಜನತೆಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಜನಪ್ರಿಯಗೊಳಿಸಿ, ಅವುಗಳನ್ನು ಪಾಲಿಸುವಂತೆ ಮಾಡಬೇಕು. ಇದರಿಂದ ಜನರಿಗೆ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಪ್ರಧಾನಿ ಸಲಹೆ ನೀಡಿದರು.</p>.<p><strong>ಕೃಷಿ ಚಟುವಟಿಕೆಗೆ ವಿನಾಯ್ತಿ: </strong>ಕೃಷಿ ಚಟುವಟಿಕೆಗಳಿಗೆ ಲಾಕ್ಡೌನ್ನಿಂದ ವಿನಾಯ್ತಿ ನೀಡಲಾಗಿದೆ. ಕೃಷಿ ಉತ್ಪನ್ನಗಳನ್ನು ಸಾಗಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮರೆಯಬಾರದು ಮತ್ತು ಬೆಳೆ ಕಟಾವು ಮಾಡುವಾಗಲೂ ಎಚ್ಚರಿಕೆವಹಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದರು ಎಂದರು.</p>.<p><strong>391 ಜನ ಕ್ವಾರಂಟೈನ್: </strong>ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಉಳಿದುಕೊಂಡು ರಾಜ್ಯ ಬಂದಿರುವ 391 ಜನರನ್ನು ಗುರುತಿಸಿ ಹೋಂ ಕ್ವಾರಂಟೈನ್ ಮತ್ತು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇನ್ನುಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.</p>.<p>ಎಲ್ಲರನ್ನೂ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗುವುದು. ಬೀದರ್ನಲ್ಲಿ 91 ಜನರನ್ನು ಪರೀಕ್ಷಿಸಿದ್ದು 11 ಜನರಲ್ಲಿ ಕೋವಿಡ್ 19 ಪತ್ತೆ ಆಗಿದೆ. ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದ್ದು, ಅವರಿಗೆ ಸೋಂಕು ತಗಲದೇ ಇರುವುದು ತಿಳಿದುಬಂದಿದೆ ಎಂದೂ ತಿಳಿಸಿದರು.</p>.<p><strong>ಕರ್ನಾಟಕದ ಮಾದರಿ ಪಾಲಿಸಲು ಸೂಚನೆ</strong><br />ಕೋವಿಡ್–19 ನಿಯಂತ್ರಣದ ಸಂಬಂಧ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಕೆಲವು ವಿಧಾನಗಳು ಮತ್ತು ತಂತ್ರಜ್ಞಾನಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ವಿಧಾನ ಮತ್ತು ತಂತ್ರಜ್ಞಾನವನ್ನು ಅನುಸರಿಸಲು ಇತರ ರಾಜ್ಯಗಳಿಗೆ ಸಲಹೆ ನೀಡಿದರು.</p>.<p>ವಿಶೇಷವಾಗಿ ವೈರಸ್ ಹರಡುವುದನ್ನು ತಡೆಯಲು 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ‘ವಾರ್ ರೂಂ’, ಕ್ವಾರಂಟೈನ್ನಲ್ಲಿ ಇದ್ದವರನ್ನು ನಿಗಾ ಇಡಲು ಜಿಪಿಎಸ್ ವ್ಯವಸ್ಥೆಯನ್ನು ಇತರ ರಾಜ್ಯಗಳೂ ಅಳವಡಿಸುವಂತೆ ಪ್ರಧಾನಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್–19 ಲಾಕ್ಡೌನ್ ಏ.14 ರವರೆಗೆ ಯಾವ ರೀತಿ ನಡೆಯುತ್ತದೆ ಎಂಬುದರ ಆಧಾರದ ಮೇಲೆ ಲಾಕ್ಡೌನ್ ವಿಸ್ತರಿಸಬೇಕೊ ಬೇಡವೊ ಎಂಬ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸೂಚ್ಯವಾಗಿ ತಿಳಿಸಿದ್ದಾರೆ.</p>.<p>ವಿವಿಧ ರಾಜ್ಯಗಳಲ್ಲಿನ ಕೋವಿಡ್–19 ಪರಿಸ್ಥಿತಿಯ ಬಗ್ಗೆ ವಿಡಿಯೋ ಸಂವಾದದ ಮೂಲಕ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿ, ದೇಶದ ಪರಿಸ್ಥಿತಿಯನ್ನು ಅವಲೋಕಿಸಿದರು. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಸಂವಾದದಲ್ಲಿ ಭಾಗವಹಿಸಿದ್ದರು.</p>.<p>ಎಲ್ಲ ರಾಜ್ಯಗಳಲ್ಲೂ ಕಟ್ಟುನಿಟ್ಟಾಗಿ ಲಾಕ್ಡೌನ್ ಪಾಲಿಸಬೇಕು. ಅದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ವಿವಿಧ ಧರ್ಮಗುರುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಲಾಕ್ಡೌನ್ ಪರಿಣಾಮಕಾರಿಯಾಗಿಸಬೇಕು ಎಂದು ಮೋದಿ ಸಲಹೆ ನೀಡಿದರು.</p>.<p>ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿಯವರಿಗೆ ವಿವರಿಸಿದ ಯುಡಿಯೂರಪ್ಪ, ವಲಸೆ ಕಾರ್ಮಿಕರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಿರುವುದಾಗಿಯೂ ಹೇಳಿದರು.</p>.<p>ಸಂವಾದದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಣದಲ್ಲಿಟ್ಟಿರುವ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದರು.</p>.<p>ಆಹಾರ– ಧಾನ್ಯಗಳು, ಹಣ್ಣು– ತರಕಾರಿ ಮತ್ತು ಔಷಧಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ನೋಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಎಲ್ಲೂ ವೈದ್ಯರ ಕೊರತೆ ಆಗಿಲ್ಲ. ಆಸ್ಪತ್ರೆಗಳು ಸದಾ ಸನ್ನದ್ಧ ಸ್ಥಿತಿಯಲ್ಲಿ ಇರುತ್ತವೆ. ಆಯುಷ್ ವೈದ್ಯರ ನೆರವನ್ನೂ ಪಡೆಯಲಾಗುವುದು ಎಂದೂ ವಿವರಿಸಿದರು.</p>.<p>ರಾಜ್ಯದಲ್ಲಿ ಈವರೆಗೆ 124 ಪ್ರಕರಣಗಳು ಮಾತ್ರ ಪತ್ತೆಯಾಗಿದ್ದು, ದೇಶದಲ್ಲಿ 9 ನೇ ಸ್ಥಾನದಲ್ಲಿದೆ. ಕೋವಿಡ್–19 ರೋಗಿಗಳ ಚಿಕಿತ್ಸೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂಬುದನ್ನೂ ಅವರ ಗಮನಕ್ಕೆ ತರಲಾಯಿತು ಎಂದರು.</p>.<p>ಜನತೆಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಹೊರಡಿಸಿರುವ ಮಾರ್ಗಸೂಚಿಗಳನ್ನು ಜನಪ್ರಿಯಗೊಳಿಸಿ, ಅವುಗಳನ್ನು ಪಾಲಿಸುವಂತೆ ಮಾಡಬೇಕು. ಇದರಿಂದ ಜನರಿಗೆ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಪ್ರಧಾನಿ ಸಲಹೆ ನೀಡಿದರು.</p>.<p><strong>ಕೃಷಿ ಚಟುವಟಿಕೆಗೆ ವಿನಾಯ್ತಿ: </strong>ಕೃಷಿ ಚಟುವಟಿಕೆಗಳಿಗೆ ಲಾಕ್ಡೌನ್ನಿಂದ ವಿನಾಯ್ತಿ ನೀಡಲಾಗಿದೆ. ಕೃಷಿ ಉತ್ಪನ್ನಗಳನ್ನು ಸಾಗಿಸುವಾಗ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಮರೆಯಬಾರದು ಮತ್ತು ಬೆಳೆ ಕಟಾವು ಮಾಡುವಾಗಲೂ ಎಚ್ಚರಿಕೆವಹಿಸುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಮೋದಿ ಸಲಹೆ ನೀಡಿದರು ಎಂದರು.</p>.<p><strong>391 ಜನ ಕ್ವಾರಂಟೈನ್: </strong>ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಉಳಿದುಕೊಂಡು ರಾಜ್ಯ ಬಂದಿರುವ 391 ಜನರನ್ನು ಗುರುತಿಸಿ ಹೋಂ ಕ್ವಾರಂಟೈನ್ ಮತ್ತು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇಡಲಾಗಿದೆ. ಇನ್ನುಳಿದವರ ಪತ್ತೆ ಕಾರ್ಯ ನಡೆದಿದೆ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.</p>.<p>ಎಲ್ಲರನ್ನೂ ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗುವುದು. ಬೀದರ್ನಲ್ಲಿ 91 ಜನರನ್ನು ಪರೀಕ್ಷಿಸಿದ್ದು 11 ಜನರಲ್ಲಿ ಕೋವಿಡ್ 19 ಪತ್ತೆ ಆಗಿದೆ. ಬೆಂಗಳೂರಿನಲ್ಲಿ 30 ಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಲಾಗಿದ್ದು, ಅವರಿಗೆ ಸೋಂಕು ತಗಲದೇ ಇರುವುದು ತಿಳಿದುಬಂದಿದೆ ಎಂದೂ ತಿಳಿಸಿದರು.</p>.<p><strong>ಕರ್ನಾಟಕದ ಮಾದರಿ ಪಾಲಿಸಲು ಸೂಚನೆ</strong><br />ಕೋವಿಡ್–19 ನಿಯಂತ್ರಣದ ಸಂಬಂಧ ರಾಜ್ಯ ಸರ್ಕಾರ ಅನುಸರಿಸುತ್ತಿರುವ ಕೆಲವು ವಿಧಾನಗಳು ಮತ್ತು ತಂತ್ರಜ್ಞಾನಗಳ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ವಿಧಾನ ಮತ್ತು ತಂತ್ರಜ್ಞಾನವನ್ನು ಅನುಸರಿಸಲು ಇತರ ರಾಜ್ಯಗಳಿಗೆ ಸಲಹೆ ನೀಡಿದರು.</p>.<p>ವಿಶೇಷವಾಗಿ ವೈರಸ್ ಹರಡುವುದನ್ನು ತಡೆಯಲು 24 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವ ‘ವಾರ್ ರೂಂ’, ಕ್ವಾರಂಟೈನ್ನಲ್ಲಿ ಇದ್ದವರನ್ನು ನಿಗಾ ಇಡಲು ಜಿಪಿಎಸ್ ವ್ಯವಸ್ಥೆಯನ್ನು ಇತರ ರಾಜ್ಯಗಳೂ ಅಳವಡಿಸುವಂತೆ ಪ್ರಧಾನಿ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>