<p><strong>ನವದೆಹಲಿ:</strong> ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 2025ರ ಆಗಸ್ಟ್-ನವೆಂಬರ್ ಅವಧಿಯಲ್ಲಿ ರಾಜ್ಯದ 31,340 ಅರ್ಹ ರೈತರು ಆರ್ಥಿಕ ನೆರವು ಪಡೆದಿಲ್ಲ ಎಂದು ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ತಿಳಿಸಿದೆ ಮತ್ತು ಹಣವನ್ನು ಬಿಡುಗಡೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.</p>.<p>ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಇಲ್ಲಿ ಭೇಟಿ ಮಾಡಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.</p>.<p>ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ: ಈ ಯೋಜನೆ ಅಡಿಯಲ್ಲಿ ರೈತರ ಹೆಚ್ಚುತ್ತಿರುವ ಯಾಂತ್ರೀಕರಣ ಬೇಡಿಕೆ ಗಮನಿಸಿ ಈ ವರ್ಷಕ್ಕೆ ಹೆಚ್ಚುವರಿ ₹250 ಕೋಟಿ ಅನುದಾನ ಕೋರಿದರು. ಅದೇ ರೀತಿ, ಮಳೆಯ ಮೇಲೆ ಅವಲಂಬಿತವಾಗಿರುವ ಕರ್ನಾಟಕದ ಕೃಷಿಯಲ್ಲಿ ಆಗಾಗ ಬೆಳೆ ನಷ್ಟಗಳನ್ನು ತಪ್ಪಿಸಲು ಸೂಕ್ಷ್ಮ ನೀರಾವರಿ ಯೋಜನೆಗೆ ಹೆಚ್ಚುವರಿ ₹250 ಕೋಟಿ ನೀಡಬೇಕು ಎಂದು ಮನವಿ ಮಾಡಿದರು. </p>.<p>ಡಿಜಿಟಲ್ ಬೆಳೆ ಸಮೀಕ್ಷೆಗೆ ಕೇಂದ್ರ ಅನುಮೋದಿಸಿದ ₹25.704 ಕೋಟಿಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿ ₹3.10 ಕೋಟಿ ಬಿಡುಗಡೆ ಮಾಡಬೇಕು. ರೈತಸಿರಿ ಯೋಜನೆಯನ್ನು ಸಿರಿಧಾನ್ಯ ರೈತರಿಗೆ ಡಿಬಿಟಿ ಮೂಲಕ ಪ್ರೋತ್ಸಾಹ ನೀಡುವ ರೀತಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ಮಾಡುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ 2025ರ ಆಗಸ್ಟ್-ನವೆಂಬರ್ ಅವಧಿಯಲ್ಲಿ ರಾಜ್ಯದ 31,340 ಅರ್ಹ ರೈತರು ಆರ್ಥಿಕ ನೆರವು ಪಡೆದಿಲ್ಲ ಎಂದು ಕರ್ನಾಟಕ ಸರ್ಕಾರವು ಕೇಂದ್ರಕ್ಕೆ ತಿಳಿಸಿದೆ ಮತ್ತು ಹಣವನ್ನು ಬಿಡುಗಡೆ ಮಾಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.</p>.<p>ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಇಲ್ಲಿ ಭೇಟಿ ಮಾಡಿದ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಈ ಕುರಿತು ಮನವಿ ಪತ್ರ ಸಲ್ಲಿಸಿದರು.</p>.<p>ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ: ಈ ಯೋಜನೆ ಅಡಿಯಲ್ಲಿ ರೈತರ ಹೆಚ್ಚುತ್ತಿರುವ ಯಾಂತ್ರೀಕರಣ ಬೇಡಿಕೆ ಗಮನಿಸಿ ಈ ವರ್ಷಕ್ಕೆ ಹೆಚ್ಚುವರಿ ₹250 ಕೋಟಿ ಅನುದಾನ ಕೋರಿದರು. ಅದೇ ರೀತಿ, ಮಳೆಯ ಮೇಲೆ ಅವಲಂಬಿತವಾಗಿರುವ ಕರ್ನಾಟಕದ ಕೃಷಿಯಲ್ಲಿ ಆಗಾಗ ಬೆಳೆ ನಷ್ಟಗಳನ್ನು ತಪ್ಪಿಸಲು ಸೂಕ್ಷ್ಮ ನೀರಾವರಿ ಯೋಜನೆಗೆ ಹೆಚ್ಚುವರಿ ₹250 ಕೋಟಿ ನೀಡಬೇಕು ಎಂದು ಮನವಿ ಮಾಡಿದರು. </p>.<p>ಡಿಜಿಟಲ್ ಬೆಳೆ ಸಮೀಕ್ಷೆಗೆ ಕೇಂದ್ರ ಅನುಮೋದಿಸಿದ ₹25.704 ಕೋಟಿಯಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಅಡಿ ₹3.10 ಕೋಟಿ ಬಿಡುಗಡೆ ಮಾಡಬೇಕು. ರೈತಸಿರಿ ಯೋಜನೆಯನ್ನು ಸಿರಿಧಾನ್ಯ ರೈತರಿಗೆ ಡಿಬಿಟಿ ಮೂಲಕ ಪ್ರೋತ್ಸಾಹ ನೀಡುವ ರೀತಿಯಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ಮಾಡುವಂತೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>