<p><strong>ನವದೆಹಲಿ:</strong> ಆಹಾರ ಸಂಸ್ಕರಣಾ ವಲಯವನ್ನು ಉತ್ತೇಜಿಸಲು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಗೆ (ಪಿಎಂಕೆಎಸ್ವೈ) 15ನೇ ಹಣಕಾಸು ಆಯೋಗದಡಿ ₹1,920 ಕೋಟಿ ಹೆಚ್ಚುವರಿ ಮೊತ್ತ ಸೇರಿದಂತೆ ₹6,520 ಕೋಟಿ ವ್ಯಯ ಮಾಡಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. </p>.<p>ಈ ಹಣಕಾಸು ವರ್ಷದಲ್ಲಿ ನೀಡಲಾಗುವ ಹೆಚ್ಚುವರಿ ಹಣವನ್ನು 50 ಬಹು-ಉತ್ಪನ್ನ ಆಹಾರ ಉತ್ತೇಜನ ಘಟಕಗಳು ಮತ್ತು 100 ಆಹಾರ ಪರೀಕ್ಷಾ ಪ್ರಯೋಗಾಲಯಗಳಿಗೆ ಬಳಸಿಕೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಹಾಗೂ ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p>.<p>2017ರಲ್ಲಿ ಪ್ರಾರಂಭಿಸಲಾದ ಈ ಯೋಜನೆಯನ್ನು 2025-26ರ ಆರ್ಥಿಕ ವರ್ಷದ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಆಹಾರ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಯಿಂದ ಆಹಾರ ಮಾದರಿಗಳ ಪರೀಕ್ಷೆ ಸುಲಲಿತವಾಗಲಿದೆ ಎಂದರು. </p>.<p><strong>ಎನ್ಸಿಡಿಸಿಗೆ ₹2 ಸಾವಿರ ಕೋಟಿ:</strong> </p><p>ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮಕ್ಕೆ (ಎನ್ಸಿಡಿಸಿ) ನಾಲ್ಕು ವರ್ಷಗಳ ಕಾಲ ₹2,000 ಕೋಟಿ ಅನುದಾನ ನೀಡಲು ಸಂಪುಟ ಅನುಮೋದನೆ ನೀಡಿದೆ. ಈ ಹಣಕಾಸಿನ ನೆರವಿನೊಂದಿಗೆ, ನಿಗಮವು ಮತ್ತಷ್ಟು ಸಾಲ ನೀಡಲು ಹೆಚ್ಚುವರಿಯಾಗಿ ₹20,000 ಕೋಟಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.</p>.<p>ಈ ತೀರ್ಮಾನದಿಂದ ಡೇರಿ, ಜಾನುವಾರು, ಮೀನುಗಾರಿಕೆ, ಸಕ್ಕರೆ, ಜವಳಿ, ಆಹಾರ ಸಂಸ್ಕರಣೆ, ಸಂಗ್ರಹಣೆ ಮತ್ತು ಶೀತಲೀಕರಣದಂತಹ ವಿವಿಧ ವಲಯಗಳ 13,288 ಸಹಕಾರ ಸಂಘಗಳ 2.9 ಕೋಟಿ ಸದಸ್ಯರಿಗೆ ಅನುಕೂಲವಾಗುವ ಸಾಧ್ಯತೆ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಹಾರ ಸಂಸ್ಕರಣಾ ವಲಯವನ್ನು ಉತ್ತೇಜಿಸಲು ಪ್ರಧಾನಮಂತ್ರಿ ಕಿಸಾನ್ ಸಂಪದ ಯೋಜನೆಗೆ (ಪಿಎಂಕೆಎಸ್ವೈ) 15ನೇ ಹಣಕಾಸು ಆಯೋಗದಡಿ ₹1,920 ಕೋಟಿ ಹೆಚ್ಚುವರಿ ಮೊತ್ತ ಸೇರಿದಂತೆ ₹6,520 ಕೋಟಿ ವ್ಯಯ ಮಾಡಲು ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. </p>.<p>ಈ ಹಣಕಾಸು ವರ್ಷದಲ್ಲಿ ನೀಡಲಾಗುವ ಹೆಚ್ಚುವರಿ ಹಣವನ್ನು 50 ಬಹು-ಉತ್ಪನ್ನ ಆಹಾರ ಉತ್ತೇಜನ ಘಟಕಗಳು ಮತ್ತು 100 ಆಹಾರ ಪರೀಕ್ಷಾ ಪ್ರಯೋಗಾಲಯಗಳಿಗೆ ಬಳಸಿಕೊಳ್ಳಲಾಗುವುದು ಎಂದು ಕೇಂದ್ರ ವಾರ್ತಾ ಹಾಗೂ ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. </p>.<p>2017ರಲ್ಲಿ ಪ್ರಾರಂಭಿಸಲಾದ ಈ ಯೋಜನೆಯನ್ನು 2025-26ರ ಆರ್ಥಿಕ ವರ್ಷದ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಆಹಾರ ಪರೀಕ್ಷಾ ಪ್ರಯೋಗಾಲಯಗಳ ಸ್ಥಾಪನೆಯಿಂದ ಆಹಾರ ಮಾದರಿಗಳ ಪರೀಕ್ಷೆ ಸುಲಲಿತವಾಗಲಿದೆ ಎಂದರು. </p>.<p><strong>ಎನ್ಸಿಡಿಸಿಗೆ ₹2 ಸಾವಿರ ಕೋಟಿ:</strong> </p><p>ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮಕ್ಕೆ (ಎನ್ಸಿಡಿಸಿ) ನಾಲ್ಕು ವರ್ಷಗಳ ಕಾಲ ₹2,000 ಕೋಟಿ ಅನುದಾನ ನೀಡಲು ಸಂಪುಟ ಅನುಮೋದನೆ ನೀಡಿದೆ. ಈ ಹಣಕಾಸಿನ ನೆರವಿನೊಂದಿಗೆ, ನಿಗಮವು ಮತ್ತಷ್ಟು ಸಾಲ ನೀಡಲು ಹೆಚ್ಚುವರಿಯಾಗಿ ₹20,000 ಕೋಟಿ ಸಂಗ್ರಹಿಸಲು ಸಾಧ್ಯವಾಗುತ್ತದೆ ಎಂದು ಸಚಿವರು ಹೇಳಿದರು.</p>.<p>ಈ ತೀರ್ಮಾನದಿಂದ ಡೇರಿ, ಜಾನುವಾರು, ಮೀನುಗಾರಿಕೆ, ಸಕ್ಕರೆ, ಜವಳಿ, ಆಹಾರ ಸಂಸ್ಕರಣೆ, ಸಂಗ್ರಹಣೆ ಮತ್ತು ಶೀತಲೀಕರಣದಂತಹ ವಿವಿಧ ವಲಯಗಳ 13,288 ಸಹಕಾರ ಸಂಘಗಳ 2.9 ಕೋಟಿ ಸದಸ್ಯರಿಗೆ ಅನುಕೂಲವಾಗುವ ಸಾಧ್ಯತೆ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>