ಮದನಿನಗರ ಸಮೀಪ ಕಾರು ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತಕ್ಕೆ ಪ್ರತಿಯಾಗಿ ಕೇರಳದ ನೋಂದಣಿ ಸಂಖ್ಯೆ ಹೊಂದಿದ್ದ ಕಾರಿನಲ್ಲಿ ಬಂದಿದ್ದ ನಾಲ್ವರ ತಂಡವು, ಅಪಘಾತವಾಗಿದ್ದ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿತ್ತು. ಇದೇ ವೇಳೆ ಮೋದಿ ರ್ಯಾಲಿಯಿಂದ ವಾಪಸ್ ಆಗುತ್ತಿದ್ದ ಬಸ್ನಲ್ಲಿದ್ದ ಯುವಕರು ಗಲಾಟೆ ಬಗ್ಗೆ ಪ್ರಶ್ನಿಸಿದ್ದರು. ಈ ವೇಳೆ ಎರಡು ತಂಡಗಳ ನಡುವೆ ಹೊಡೆದಾಟ ನಡೆದಿದೆ. ಇನ್ನೊಂದು ತಂಡದವರು ಬಸ್ನ ಒಳಗಡೆ ಇದ್ದ ಮಹಿಳೆಯರ ಮೇಲೂ ಹಲ್ಲೆ ಮಾಡಿದ್ದಾರೆ. ಬಳಿಕ ಬಸ್, ಕಾರ್ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಜಿಗೆ ಹಾನಿ ಆಗಿದೆ. ಘಟನೆಯಿಂದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.