ಕೇಂದ್ರಕ್ಕೆ ಹೋಗುವ ತೆರಿಗೆಯ ನ್ಯಾಯಯುತ ಹಂಚಿಕೆ ಆಗದಿದ್ದರೆ ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಆಗಬೇಕಾಗುತ್ತದೆ ಎನ್ನುವ ಸಂಸದ ಡಿ.ಕೆ.ಸುರೇಶ್ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ. ತನ್ನ ಮಾತಿನಲ್ಲಿ ತಪ್ಪೇ ಇಲ್ಲ ಎಂಬ ಹೇಳಿಕೆಯನ್ನ ಡಿ.ಕೆ.ಸುರೇಶ್ ನೀಡಿದ್ದಾರೆ. ಇತ್ತ ಕಾಂಗ್ರೆಸ್ ಸರ್ಕಾರ ದೇಶವನ್ನು ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ವಿಪಕ್ಷಗಳು ಕುಟುಕಿವೆ.