ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ಕಾರು –ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಮೈಸೂರಿನಲ್ಲಿ ನಡೆದ ಭೀಕರ ಅಪಘಾತದಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಸ್ಥರಿಗೆ ನನ್ನ ಸಂತಾಪ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ತಲಾ ₹2 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದೆ.
Deeply saddened to by the tragic accident in Mysuru, Karnataka. My thoughts are with the families who have lost their loved ones. Praying for the speedy recovery of those injured: PM @narendramodi
ಮೈಸೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಕ್ಕಳೂ ಸೇರಿದಂತೆ ಹಲವು ಮಂದಿ ಮೃತಪಟ್ಟಿರುವುದು ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.
Pained to learn about the unfortunate loss of lives including those of children in a road accident in Mysuru. My condolences to the bereaved families. I pray for the speedy recovery of the injured.
— President of India (@rashtrapatibhvn) May 29, 2023
ಮೃತರು ಬಳ್ಳಾರಿ ಜಿಲ್ಲೆಯವರು ಎಂದು ಗುರುತಿಸಲಾಗಿದೆ. ಮಹದೇಶ್ವರ ಬೆಟ್ಟದಿಂದ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.