<p><strong>ದಾವಣಗೆರೆ: </strong>ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದಡಿ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.</p><p>ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ಐಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ. ತನಿಖೆ ಆರಂಭಿಸಿದ ಪೊಲೀಸರು ದೂರುದಾರರ ಹೇಳಿಕೆ ಪಡೆದಿದ್ದಾರೆ.</p><p>‘ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಪುತ್ರನಿಂದ ವಚನಾನಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ತಾಯಿಯೊಬ್ಬರು ಲಕ್ಷ್ಮೀಶ್ವರ ತಾಲ್ಲೂಕಿನಲ್ಲಿ ದೂರು ನೀಡಿದ್ದರು. ಈ ಪ್ರಕರಣ ಹರಿಹರದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ತನಿಖೆ ಆರಂಭಿಸಿದ್ದೇವೆ. ಸಂತ್ರಸ್ತ ಬಾಲಕನ ಹೇಳಿಕೆ ಪಡೆಯಲಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ತಿಳಿಸಿದ್ದಾರೆ.</p><p>ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್ ಸ್ವಾಮೀಜಿ ಅವರನ್ನು ಇತ್ತೀಚೆಗೆ ಪೀಠದಿಂದ ಪದಚ್ಯುತಗೊಳಿಸಿತ್ತು. ಮಠದಲ್ಲಿದ್ದ ಮಕ್ಕಳಿಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪ ಆ ಬಳಿಕ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಸೇರಿದಂತೆ ಹಲವರ ಹೇಳಿಕೆ ದಾಖಲಿಸಿಕೊಂಡಿತ್ತು.</p>.<p><strong>ನಿರೀಕ್ಷಣಾ ಜಾಮೀನು ಪಡೆದಿರುವ ಸ್ವಾಮೀಜಿ</strong></p><p>ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಾಗು ತ್ತಿದ್ದಂತೆಯೇ ನ್ಯಾಯಾಲಯದ ಮೊರೆ ಹೋಗಿದ್ದ ವಚನಾನಂದ ಸ್ವಾಮೀಜಿ ಅವರು ಮೇ 2ರಂದು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದರಿಂದ ತಕ್ಷಣಕ್ಕೆ ಅವರ ಬಂಧನ ಸಾಧ್ಯತೆ ವಿರಳ ಎನ್ನಲಾಗುತ್ತಿದೆ.</p><p>ವಚನಾನಂದ ಸ್ವಾಮೀಜಿ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ- 482ರ ಅಡಿ ನಿರೀಕ್ಷಣಾ ಜಾಮೀನು ಕೋರಿ ಏ.21ರಂದು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಸೊ ವಿಶೇಷ ನ್ಯಾಯಾಲಯ) ಸ್ವಾಮೀಜಿಗೆ ಮೇ 2ರಂದು ಜಾಮೀನು ಮಂಜೂರು ಮಾಡಿತ್ತು.</p>.<p><strong>ದೂರಿನಲ್ಲಿ ಏನಿದೆ?</strong></p><p>ಸಂತ್ರಸ್ತ ಬಾಲಕನಿಗೆ ಈಗ 16 ವರ್ಷ. ಹರಿಹರ ಬಳಿಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ, 2021ರಿಂದ 2024ರವರೆಗೆ ಮಠದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದ. ಈ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದು ದೂರಿನಲ್ಲಿದೆ.</p><p>‘ವಸತಿ ನಿಲಯದ ಬಾಲಕರು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಸ್ನಾನದ ಕೊಠಡಿಗೆ ತೆರಳುತ್ತಿದ್ದ ಸ್ವಾಮೀಜಿ, ಬಟ್ಟೆ ಬಿಚ್ಚಿಸಿ ತಾವು ಕೂಡ ಬೆತ್ತಲಾಗುತ್ತಿದ್ದರು. ದೇಹದ ಖಾಸಗಿ ಭಾಗ ಸೇರಿದಂತೆ ಎಲ್ಲೆಡೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು. ಬಾಲಕರ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಸಂತ್ರಸ್ತ ಬಾಲಕನ ತಾಯಿ ಠಾಣೆಗೆ ನೀಡಿದ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಬಾಲಕನ ಮೇಲೆ ದೌರ್ಜನ್ಯ ನಡೆಸಿದ ಆರೋಪದಡಿ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.</p><p>ಗದಗ ಜಿಲ್ಲೆಯ ಲಕ್ಷ್ಮೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ‘0’ ಎಫ್ಐಆರ್, ಕೃತ್ಯ ನಡೆದ ಸ್ಥಳದ ವ್ಯಾಪ್ತಿಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದೆ. ತನಿಖೆ ಆರಂಭಿಸಿದ ಪೊಲೀಸರು ದೂರುದಾರರ ಹೇಳಿಕೆ ಪಡೆದಿದ್ದಾರೆ.</p><p>‘ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ ಪುತ್ರನಿಂದ ವಚನಾನಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂದು ಆರೋಪಿಸಿ ತಾಯಿಯೊಬ್ಬರು ಲಕ್ಷ್ಮೀಶ್ವರ ತಾಲ್ಲೂಕಿನಲ್ಲಿ ದೂರು ನೀಡಿದ್ದರು. ಈ ಪ್ರಕರಣ ಹರಿಹರದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದು, ತನಿಖೆ ಆರಂಭಿಸಿದ್ದೇವೆ. ಸಂತ್ರಸ್ತ ಬಾಲಕನ ಹೇಳಿಕೆ ಪಡೆಯಲಿದ್ದೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಚ್.ಟಿ. ಶೇಖರ್ ತಿಳಿಸಿದ್ದಾರೆ.</p><p>ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠ ಟ್ರಸ್ಟ್ ಸ್ವಾಮೀಜಿ ಅವರನ್ನು ಇತ್ತೀಚೆಗೆ ಪೀಠದಿಂದ ಪದಚ್ಯುತಗೊಳಿಸಿತ್ತು. ಮಠದಲ್ಲಿದ್ದ ಮಕ್ಕಳಿಂದ ಸ್ವಾಮೀಜಿ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು ಎಂಬ ಆರೋಪ ಆ ಬಳಿಕ ಕೇಳಿ ಬಂದಿತ್ತು. ಈ ಸಂಬಂಧ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಸೇರಿದಂತೆ ಹಲವರ ಹೇಳಿಕೆ ದಾಖಲಿಸಿಕೊಂಡಿತ್ತು.</p>.<p><strong>ನಿರೀಕ್ಷಣಾ ಜಾಮೀನು ಪಡೆದಿರುವ ಸ್ವಾಮೀಜಿ</strong></p><p>ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಾಗು ತ್ತಿದ್ದಂತೆಯೇ ನ್ಯಾಯಾಲಯದ ಮೊರೆ ಹೋಗಿದ್ದ ವಚನಾನಂದ ಸ್ವಾಮೀಜಿ ಅವರು ಮೇ 2ರಂದು ನಿರೀಕ್ಷಣಾ ಜಾಮೀನು ಪಡೆದಿದ್ದಾರೆ. ಇದರಿಂದ ತಕ್ಷಣಕ್ಕೆ ಅವರ ಬಂಧನ ಸಾಧ್ಯತೆ ವಿರಳ ಎನ್ನಲಾಗುತ್ತಿದೆ.</p><p>ವಚನಾನಂದ ಸ್ವಾಮೀಜಿ ಅವರು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಕಲಂ- 482ರ ಅಡಿ ನಿರೀಕ್ಷಣಾ ಜಾಮೀನು ಕೋರಿ ಏ.21ರಂದು ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಪೋಕ್ಸೊ ವಿಶೇಷ ನ್ಯಾಯಾಲಯ) ಸ್ವಾಮೀಜಿಗೆ ಮೇ 2ರಂದು ಜಾಮೀನು ಮಂಜೂರು ಮಾಡಿತ್ತು.</p>.<p><strong>ದೂರಿನಲ್ಲಿ ಏನಿದೆ?</strong></p><p>ಸಂತ್ರಸ್ತ ಬಾಲಕನಿಗೆ ಈಗ 16 ವರ್ಷ. ಹರಿಹರ ಬಳಿಯ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕ, 2021ರಿಂದ 2024ರವರೆಗೆ ಮಠದ ವಸತಿ ನಿಲಯದಲ್ಲಿ ಆಶ್ರಯ ಪಡೆದಿದ್ದ. ಈ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದು ದೂರಿನಲ್ಲಿದೆ.</p><p>‘ವಸತಿ ನಿಲಯದ ಬಾಲಕರು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಸ್ನಾನದ ಕೊಠಡಿಗೆ ತೆರಳುತ್ತಿದ್ದ ಸ್ವಾಮೀಜಿ, ಬಟ್ಟೆ ಬಿಚ್ಚಿಸಿ ತಾವು ಕೂಡ ಬೆತ್ತಲಾಗುತ್ತಿದ್ದರು. ದೇಹದ ಖಾಸಗಿ ಭಾಗ ಸೇರಿದಂತೆ ಎಲ್ಲೆಡೆ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು. ಬಾಲಕರ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ’ ಎಂದು ಸಂತ್ರಸ್ತ ಬಾಲಕನ ತಾಯಿ ಠಾಣೆಗೆ ನೀಡಿದ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>