<p><strong>ರಾಯಚೂರು:</strong> ‘ಸಂವಿಧಾನ ವಿರೋಧಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇನೆ.ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಸೇರಿದಂತೆ ದೇಶವನ್ನು ನಾಶ ಮಾಡುವ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ’ ಎಂದು ಕ್ರಾಂತಿಕಾರಿ ಕವಿ ಗದ್ದರ್ ಹೇಳಿದರು.</p>.<p>‘ಸಂವಿಧಾನ ಉಳಿಸುವುದಾಗಿ ಕಾಂಗ್ರೆಸ್ ನೇತೃತ್ವದ ಪಕ್ಷಗಳು ಮುಂದೆ ಬಂದಿವೆ. ಸಂವಿಧಾನದ ಪ್ರಕಾರ ಆಡಳಿತ ಮಾಡುವವರಿಗೆ ಬೆಂಬಲ ನೀಡಲಾಗುವುದು. ಆದರೆ, ಕಾಂಗ್ರೆಸ್ ಸಂಬಂಧದ ಬಗ್ಗೆ ಹಲವು ಸಂಶಯಗಳು ವ್ಯಕ್ತವಾಗಿವೆ. ಸಿದ್ಧಾಂತವನ್ನು ಬಲಿಕೊಟ್ಟು ಕಾಂಗ್ರೆಸ್ ಅನ್ನು ಅಪ್ಪಿಕೊಳ್ಳಲ್ಲ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಮನುವಾದಿ ಸಂಸ್ಕೃತಿಯ ಆಡಳಿತ ದೇಶಕ್ಕೆ ಅಪಾಯಕಾರಿಯಾಗಿದೆ. ಆದ್ದರಿಂದ ಬಿಜೆಪಿ ಬೆಂಬಲಿತ ಒಕ್ಕೂಟವನ್ನು ವಿರೋಧಿಸುತ್ತೇನೆ’ ಎಂದರು.</p>.<p>‘ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ನೀಡುವುದಕ್ಕೆ ವಿರೋಧವಿಲ್ಲ. ಆದರೆ, ಕೇಂದ್ರ ಸರ್ಕಾರ ರಾಜಕೀಯ ಉದ್ದೇಶದಿಂದ ಶೇ 10ರಷ್ಟು ಮೀಸಲಾತಿ ನೀಡಿದೆ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ’ ಎಂದರು.</p>.<p>‘ಸಂವಿಧಾನದ ಆಶಯ ಶೇ25 ರಷ್ಟಾದರೂಜಾರಿಯಾಗಿದ್ದರೆ ದೇಶದಲ್ಲಿ ನಕ್ಸಲ್ ಚಟುವಟಿಕೆ ಇರುತ್ತಿರಲಿಲ್ಲ. ಇದನ್ನು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ದೇಶದಲ್ಲಿ ಹೆಚ್ಚಿನ ತ್ಯಾಗ ಮಾಡಿದವರು ನಕ್ಸಲರು ಮಾತ್ರ’ ಎಂದು ತಿಳಿಸಿದರು.</p>.<p>‘ನನಗೆ 71 ವರ್ಷ ವಯಸ್ಸಾಗಿದ್ದು, ತೆಲಂಗಾಣದಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಸಂವಿಧಾನ ವಿರೋಧಿಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದೇನೆ.ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್ ಸೇರಿದಂತೆ ದೇಶವನ್ನು ನಾಶ ಮಾಡುವ ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ’ ಎಂದು ಕ್ರಾಂತಿಕಾರಿ ಕವಿ ಗದ್ದರ್ ಹೇಳಿದರು.</p>.<p>‘ಸಂವಿಧಾನ ಉಳಿಸುವುದಾಗಿ ಕಾಂಗ್ರೆಸ್ ನೇತೃತ್ವದ ಪಕ್ಷಗಳು ಮುಂದೆ ಬಂದಿವೆ. ಸಂವಿಧಾನದ ಪ್ರಕಾರ ಆಡಳಿತ ಮಾಡುವವರಿಗೆ ಬೆಂಬಲ ನೀಡಲಾಗುವುದು. ಆದರೆ, ಕಾಂಗ್ರೆಸ್ ಸಂಬಂಧದ ಬಗ್ಗೆ ಹಲವು ಸಂಶಯಗಳು ವ್ಯಕ್ತವಾಗಿವೆ. ಸಿದ್ಧಾಂತವನ್ನು ಬಲಿಕೊಟ್ಟು ಕಾಂಗ್ರೆಸ್ ಅನ್ನು ಅಪ್ಪಿಕೊಳ್ಳಲ್ಲ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>‘ಮನುವಾದಿ ಸಂಸ್ಕೃತಿಯ ಆಡಳಿತ ದೇಶಕ್ಕೆ ಅಪಾಯಕಾರಿಯಾಗಿದೆ. ಆದ್ದರಿಂದ ಬಿಜೆಪಿ ಬೆಂಬಲಿತ ಒಕ್ಕೂಟವನ್ನು ವಿರೋಧಿಸುತ್ತೇನೆ’ ಎಂದರು.</p>.<p>‘ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ಮೀಸಲಾತಿ ನೀಡುವುದಕ್ಕೆ ವಿರೋಧವಿಲ್ಲ. ಆದರೆ, ಕೇಂದ್ರ ಸರ್ಕಾರ ರಾಜಕೀಯ ಉದ್ದೇಶದಿಂದ ಶೇ 10ರಷ್ಟು ಮೀಸಲಾತಿ ನೀಡಿದೆ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ’ ಎಂದರು.</p>.<p>‘ಸಂವಿಧಾನದ ಆಶಯ ಶೇ25 ರಷ್ಟಾದರೂಜಾರಿಯಾಗಿದ್ದರೆ ದೇಶದಲ್ಲಿ ನಕ್ಸಲ್ ಚಟುವಟಿಕೆ ಇರುತ್ತಿರಲಿಲ್ಲ. ಇದನ್ನು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ದೇಶದಲ್ಲಿ ಹೆಚ್ಚಿನ ತ್ಯಾಗ ಮಾಡಿದವರು ನಕ್ಸಲರು ಮಾತ್ರ’ ಎಂದು ತಿಳಿಸಿದರು.</p>.<p>‘ನನಗೆ 71 ವರ್ಷ ವಯಸ್ಸಾಗಿದ್ದು, ತೆಲಂಗಾಣದಲ್ಲಿ ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>