ಮತ್ತೆ ಕಲಾಪ ಆರಂಭವಾದಾಗಲೂ ಧರಣಿ ಮುಂದುವರಿಯಿತು. ಸಚಿವ ಸಿ.ಟಿ.ರವಿ ಅವರ ಹೇಳಿಕೆಗೆ ತೃಪ್ತರಾಗದ ಎಸ್ ಆರ್ ಪಾಟೀಲ, ಬಸವರಾಜ ಹೊರಟ್ಟಿ, ಕೆ.ಟಿ.ಶ್ರೀಕಂಠೇಗೌಡ ಅವರು ಮುಖ್ಯಮಂತ್ರಿ ಅವರೇ ಸೋಮವಾರ ಬೆಳಿಗ್ಗೆ ಸದನಕ್ಕೆ ಬಂದು ಉತ್ತರ ನೀಡಬೇಕು, ಗೋವಾಕ್ಕೆ ನಿಯೋಗ ಕಳುಹಿಸಬೇಕು ಎಂದರು. ಮುಖ್ಯಮಂತ್ರಿ ಬಳಿ ಈ ವಿಚಾರ ಚರ್ಚಿಸಿ, ಸದನಕ್ಕೆ ಬರಲು ತಿಳಿಸುವುದಾಗಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ ಬಳಿಕ ಧರಣಿ ಹಿಂದೆಗೆದುಕೊಳ್ಳಲಾಯಿತು.