<p><strong>ಕಲಬುರ್ಗಿ</strong>: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದ ಕಣ್ಣಿ ಮಾರ್ಕೆಟ್ ಕಟ್ಟಡದ ಅಡಿಗಲ್ಲು ಸಮಾರಂಭದ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬರಿಗೆ ಶಾಕ್ ಕಾದಿತ್ತು.</p>.<p>ಕಾರ್ಯಕ್ರಮ ಸ್ಥಳಕ್ಕೆ ತೆರಳುವ ಸಂದರ್ಭದಲ್ಲಿ ಅವರನ್ನು ತಡೆದ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು, ಕಪ್ಪು ಟೀ ಶರ್ಟ್ ತೆಗೆದು ಬೇರೆ ಬಟ್ಟೆ ಹಾಕಿಕೊಂಡು ಬಂದರೆ ಒಳಗೆ ಹೋಗಲು ಅವಕಾಶ ನೀಡುವುದಾಗಿ ತಿಳಿಸಿದರು. ಇದರಿಂದ ತಬ್ಬಿಬ್ಬುಕೊಂಡ ಆ ವ್ಯಕ್ತಿ ಏಕೆ ಎಂದಾಗ, ‘ಆ ಟೀ ಶರ್ಟ್ ಕಳಚಿ ಧ್ವಜದ ರೀತಿ ಬಳಸಿ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಬಹುದು’ ಎಂದು ಪ್ರತ್ಯುತ್ತರ ಕೊಟ್ಟರು.</p>.<p>ಇದರಿಂದ ಕಕ್ಕಾಬಿಕ್ಕಿಯಾದ ಆ ವ್ಯಕ್ತಿ, ಅಂತಹ ಯಾವ ಉದ್ದೇಶವೂ ತಮಗಿಲ್ಲ ಎಂದು ತಮ್ಮ ಪರಿಚಯ ಹೇಳಿಕೊಳ್ಳಲು ಮುಂದಾದರು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿ ಅವರನ್ನು ಗುರುತು ಹಿಡಿದು ಒಳಗೆ ಕಳಿಸಿದರು.</p>.<p>ಲೋಕೋಪಯೋಗಿ ಇಲಾಖೆಯ ಕಟ್ಟಡ ಉದ್ಘಾಟನೆಗೆ ತೆರಳಿದ್ದ ಸಾರ್ವಜನಿಕರು ಹಾಕಿದ್ದ ಕಪ್ಪು ಮಾಸ್ಕ್ ತೆಗೆಸಿ ನೀಲಿ ಮಾಸ್ಕ್ಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ</strong>: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಭಾಗವಹಿಸಿದ್ದ ಕಣ್ಣಿ ಮಾರ್ಕೆಟ್ ಕಟ್ಟಡದ ಅಡಿಗಲ್ಲು ಸಮಾರಂಭದ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದ ವ್ಯಕ್ತಿಯೊಬ್ಬರಿಗೆ ಶಾಕ್ ಕಾದಿತ್ತು.</p>.<p>ಕಾರ್ಯಕ್ರಮ ಸ್ಥಳಕ್ಕೆ ತೆರಳುವ ಸಂದರ್ಭದಲ್ಲಿ ಅವರನ್ನು ತಡೆದ ಪೊಲೀಸ್ ಕಾನ್ಸ್ಟೆಬಲ್ ಒಬ್ಬರು, ಕಪ್ಪು ಟೀ ಶರ್ಟ್ ತೆಗೆದು ಬೇರೆ ಬಟ್ಟೆ ಹಾಕಿಕೊಂಡು ಬಂದರೆ ಒಳಗೆ ಹೋಗಲು ಅವಕಾಶ ನೀಡುವುದಾಗಿ ತಿಳಿಸಿದರು. ಇದರಿಂದ ತಬ್ಬಿಬ್ಬುಕೊಂಡ ಆ ವ್ಯಕ್ತಿ ಏಕೆ ಎಂದಾಗ, ‘ಆ ಟೀ ಶರ್ಟ್ ಕಳಚಿ ಧ್ವಜದ ರೀತಿ ಬಳಸಿ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಬಹುದು’ ಎಂದು ಪ್ರತ್ಯುತ್ತರ ಕೊಟ್ಟರು.</p>.<p>ಇದರಿಂದ ಕಕ್ಕಾಬಿಕ್ಕಿಯಾದ ಆ ವ್ಯಕ್ತಿ, ಅಂತಹ ಯಾವ ಉದ್ದೇಶವೂ ತಮಗಿಲ್ಲ ಎಂದು ತಮ್ಮ ಪರಿಚಯ ಹೇಳಿಕೊಳ್ಳಲು ಮುಂದಾದರು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿ ಅವರನ್ನು ಗುರುತು ಹಿಡಿದು ಒಳಗೆ ಕಳಿಸಿದರು.</p>.<p>ಲೋಕೋಪಯೋಗಿ ಇಲಾಖೆಯ ಕಟ್ಟಡ ಉದ್ಘಾಟನೆಗೆ ತೆರಳಿದ್ದ ಸಾರ್ವಜನಿಕರು ಹಾಕಿದ್ದ ಕಪ್ಪು ಮಾಸ್ಕ್ ತೆಗೆಸಿ ನೀಲಿ ಮಾಸ್ಕ್ಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>