ನವನಗರದಲ್ಲಿರುವ ಎಸ್ಪಿ ನಿವಾಸದ ಗೇಟ್ ಎದುರಿನ ರಸ್ತೆ ಪಕ್ಕ ತಲೆಗೆ ಗುಂಡು ತಗುಲಿದ ಸ್ಥಿತಿಯಲ್ಲಿ ಮಂಜುನಾಥ ಶವ ಪತ್ತೆಯಾಗಿದೆ. ಶವದ ಪಕ್ಕ ಎರಡು ಜೀವಂತ ಗುಂಡು ಹಾಗೂ 303 ಸರ್ವಿಸ್ ರೈಫಲ್ ಬಿದ್ದಿರುವುದು ಕಂಡು ಬಂದಿದೆ. ಮಂಜುನಾಥ ಕೊಪ್ಪಳ ಜಿಲ್ಲೆ ಕುಷ್ಠಗಿ ತಾಲ್ಲೂಕು ಮಿಟ್ಟಲಕೋಡದವರು. ವರ್ಷದ ಹಿಂದಷ್ಟೇ ಬಾಗಲಕೋಟೆಗೆ ವರ್ಗಾವಣೆಯಾಗಿ ಬಂದಿದ್ದು, ಅವರನ್ನು ಎಸ್ಪಿ ನಿವಾಸದ ಭದ್ರತೆಗೆ ನಿಯೋಜಿಸಲಾಗಿತ್ತು.