‘ಪೊಲೀಸರು ಸಿವಿಲ್ ವ್ಯಾಜ್ಯದಲ್ಲಿ ಮಧ್ಯಪ್ರವೇಶ ಮಾಡಬಾರದು ಎಂಬುದಾಗಿ ಹೈಕೋರ್ಟ್ನ ಸಾಕಷ್ಟು ಪೀಠಗಳು ಹಲವು ಬಾರಿ ಆದೇಶಿಸಿವೆ. ಆದರೂ, ಪೊಲೀಸರು ಮಾತ್ರ ಸಿವಿಲ್ ವ್ಯಾಜ್ಯಗಳಲ್ಲಿ ಮೂಗು ತೂರಿಸುತ್ತಲೇ ಇದ್ದಾರೆ. ಈ ಕ್ರಮ ಒಪ್ಪುವಂತದಲ್ಲ’ ಎಂದು ಹೇಳಿರುವ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಚಂದ್ರಾ ಲೇ ಔಟ್ ಠಾಣೆಯ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ಅದಕ್ಕೆ ಸಂಬಂಧಿಸಿದ ಮುಂದಿನ ಎಲ್ಲಾ ನ್ಯಾಯಿಕ ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿದೆ.