ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ –ಬಿಜೆಪಿ ನಾಯಕರ ಮಧ್ಯೆ ಪರಸ್ಪರ ವಾಗ್ದಾಳಿ, ಕೆಸರೆರಚಾಟ ಜೋರಾಗಿದೆ.
ಪ್ರಕರಣಸಂಬಂಧವಿಡಿಯೊ ಸಮೇತ ಟ್ವೀಟ್ ಮಾಡಿರುವ ಕಾಂಗ್ರೆಸ್, ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಕಿಡಿಕಾರಿದೆ.
‘ಪಿಎಸ್ಐ ನೇಮಕಾತಿಯಲ್ಲಿ ಅಕ್ರಮವೇ ಆಗಿಲ್ಲವೆಂದು ಇಷ್ಟು ಆತ್ಮವಿಶ್ವಾಸದಿಂದ ಸದನದಲ್ಲಿ ಸಮರ್ಥಿಸಿದ ಅರಗ ಜ್ಞಾನೇಂದ್ರ ಅವರೇ, ಈ ಸಮರ್ಥನೆಗೂ, ದಿವ್ಯಾ ಹಾಗರಗಿ ಬಂಧನ ಆಗದಿರುವುದಕ್ಕೂ, ನೀವು ಅವರ ಆದರಾತಿಥ್ಯ ಸ್ವೀಕರಿಸಿದ್ದಕ್ಕೂ ಗಾಢಸಂಬಂಧ ಇದೆಯಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.