‘ಈ ಪ್ರಕರಣದಲ್ಲಿ ಪೊಲೀಸರು ಕಾನೂನು ಪ್ರಕ್ರಿಯೆ ಪಾಲಿಸದೆ ಎಫ್ಐಆರ್ ಮತ್ತು ದೋಷಾರೋಪ ಪಟ್ಟಿ ದಾಖಲಿಸಿದ್ದಾರೆ’ ಎಂದಿರುವ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಿದೆ. ಮಿತಿಮೀರಿದ ಬಡ್ಡಿ ವಿಧಿಸುವಿಕೆ ನಿಷೇಧ ಕಾಯ್ದೆ-2004ರ ಕಲಂ 3 ಮತ್ತು 4ರ ಅಡಿಯಲ್ಲಿ ಅಧಿಕ ಬಡ್ಡಿ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವ ಮುನ್ನ ತನಿಖೆ ನಡೆಸುವುದು ಕಾನೂನುಬಾಹಿರ. ಕರ್ನಾಟಕ ಲೇವಾದೇವಿದಾರರ ಕಾಯ್ದೆಯ ಕಲಂ 15ರ ಪ್ರಕಾರ ರಿಜಿಸ್ಟ್ರಾರ್, ಸಹಾಯಕ ರಿಜಿಸ್ಟ್ರಾರ್ ಅಥವಾ ಸಕ್ಷಮ ಪ್ರಾಧಿಕಾರದ ಅಧಿಕಾರಿ ಅವರಂತಹ ನಿರ್ದಿಷ್ಟ ಅಧಿಕಾರಿ ಮಾತ್ರ ಅಧಿಕ ಬಡ್ಡಿ ವಸೂಲಿ ಮಾಡುವವರ ಮೇಲೆ ದಾಳಿ ನಡೆಸಿ ಶೋಧಿಸಿ ಜಪ್ತಿ ಮಾಡುವ ಅಧಿಕಾರ ಹೊಂದಿದ್ದಾರೆ’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ‘ನೊಂದ ಸಾಲಗಾರರು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಪರಿಹಾರ ಕಂಡುಕೊಳ್ಳಬಹುದು’ ಎಂದು ಆದೇಶಿಸಲಾಗಿದೆ.